ತ್ಯಾವರೆಕೊಪ್ಪ ಸಿಂಹಧಾಮದಲ್ಲಿ ಸಿಂಹಗಳ ನಡುವೆ ಕಾದಾಟ, ಸಿಂಹಿಣಿ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 1 ಫೆಬ್ರವರಿ 2022

ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಎರಡು ಸಿಂಹಗಳ ನಡುವೆ ಕಾದಾಟವಾಗಿದೆ. ಘಟನೆಯಲ್ಲಿ ಸಿಂಹಿಣಿಯೊಂದು ಸಾವನ್ನಪ್ಪಿದೆ. ಇದರಿಂದ ಸಿಂಹಧಾಮದಲ್ಲಿ ಸಿಂಹಗಳ ಸಂಖ್ಯೆ 5ಕ್ಕೆ ಕುಸಿದಿದೆ.

nanjappa hospital corona care

ಕಾದಾಟದಲ್ಲಿ ತೀವ್ರ ಗಾಯಗೊಂಡಿದ್ದ ಮಾನ್ಯಾ (11) ಎಂಬ ಸಿಂಹಿಣಿ ಸಾವನ್ನಪ್ಪಿದೆ. ಸೋಮವಾರ ಮಾನ್ಯಾಳ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.

ವಾರದ ಹಿಂದೆ ಕಾದಾಟ

ಸಿಂಹಧಾಮದ ಯಶವಂತ ಎಂಬ ಸಿಂಹದ ಜೊತೆಗೆ ಮಾನ್ಯಾ ಕಾದಾಟ ನಡೆಸಿತ್ತು. ಒಂದು ವಾರದ ಹಿಂದೆ ಇವೆರಡು ಸಿಂಹಗಳ ನಡುವೆ ಕಾದಾಟವಾಗಿತ್ತು. ‘ಕಾದಾಟದ ಹಿನ್ನೆಲೆಯಲ್ಲಿ ಎರಡು ಸಿಂಹಗಳನ್ನು ಪ್ರತ್ಯೇಕವಾಗಿ ಇರಿಸಲಾಗಿತ್ತು. ಆದರೆ ತೀವ್ರ ಗಾಯಗೊಂಡಿದ್ದ ಮಾನ್ಯಾ ಸಾವನ್ನಪ್ಪಿದೆ’ ಎಂದು ಹುಲಿ ಮತ್ತು ಸಿಂಹಧಾಮದ ಕಾರ್ಯನಿರ್ವಾಹಕ ನಿರ್ದೇಶಕ ಮುಕುಂದ ಚಂದ್ರ ತಿಳಿಸಿದ್ದಾರೆ.

2011ರಲ್ಲಿ ಶಿವಮೊಗ್ಗಕ್ಕೆ ಬಂದಿತ್ತು

ಸಿಂಹಿಣಿ ಮಾನ್ಯಾಳನ್ನು 2011ರಲ್ಲಿ ತ್ಯಾವರೆಕೊಪ್ಪದ ಸಿಂಹಧಾಮಕ್ಕೆ ತರಲಾಗಿತ್ತು. ಮೈಸೂರು ಮೃಗಾಲಯದಿಂದ ಆರ್ಯ, ಮಾಲಿನಿ ಮತ್ತು ಮಾನ್ಯಾ ಸಿಂಹಗಳು ಇಲ್ಲಿಗೆ ಬಂದಿದ್ದವು. ಹಾಗಾಗಿ ತ್ಯಾವರೆಕೊಪ್ಪ ಸಿಂಹಧಾಮದಲ್ಲಿ ಮೂರು ಗಂಡು, ಮೂರು ಹೆಣ್ಣು ಸಿಂಹಗಳು ಇದ್ದವು. ಈಗ ಮಾನ್ಯಾ ಸಾವನ್ನಪ್ಪಿರುವುದರಿಂದ ಮೃಗಾಲಯದಲ್ಲಿ ಸಿಂಹಗಳ ಸಂಖ್ಯೆ ಐದಕ್ಕೆ ಕುಸಿದಿದೆ.

Tiger_and_Lion_SafariAbout Shivamogga Live

about smg live readers

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment