ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಲೋಕಾಯುಕ್ತ ಅಧಿಕಾರಿಗಳ ಎರಡು ತಂಡ ಶಿವಮೊಗ್ಗ ತಾಲೂಕಿನ ವಿವಿಧ ಅಂಗನವಾಡಿಗಳಿಗೆ ದಿಢೀರ್ ಭೇಟಿ (Sudden Visit) ನೀಡಿ ಪರಿಶೀಲಿಸಿದರು. ಈ ವೇಳೆ ಹಲವು ನ್ಯೂನತೆ ಕಂಡು ಬಂದಿದೆ. ಒಂದು ವಾರದೊಳಗೆ ಸಮಸ್ಯೆ ಪರಿಹರಿಸಿ ವರದಿ ನೀಡುವಂತೆ ಲೋಕಾಯುಕ್ತ ಅಧಿಕಾರಿಗಳು ಸೂಚಿಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ್ ಮತ್ತು ಇನ್ಸ್ಪೆಕ್ಟರ್ ವೀರಬಸಪ್ಪ ಎಲ್.ಕುಸಲಾಪುರ ನೇತೃತ್ವದಲ್ಲಿ ಎರಡು ತಂಡ ರಚಿಸಲಾಗಿತ್ತು. ಆಯನೂರು ವ್ಯಾಪ್ತಿಯ 4 ಅಂಗನವಾಡಿಗಳು, ಕುಂಸಿ ವ್ಯಾಪ್ತಿಯ 4 ಅಂಗನವಾಡಿಗಳಿಗೆ ಲೋಕಾಯುಕ್ತ ಅಧಿಕಾರಿಗಳ ಪ್ರತ್ಯೇಕ ತಂಡ ದಿಢೀರ್ ಭೇಟಿ ನೀಡಿ ಪರಿಶೀಲಿಸಿತು.
ಏನೇನೆಲ್ಲ ನ್ಯೂನತೆ ಕಾಣಿಸಿತು?
- ಪುಷ್ಠಿ ಆಹಾರದ ಪ್ಯಾಕೇಟ್ ಮೇಲೆ ಉತ್ಪಾದನಾ ದಿನಾಂಕ ಮತ್ತು ಅವಧಿ ಮೀರಿದ ದಿನಾಂಕ ನಮೂದು ಮಾಡಿಲ್ಲ.
[su_divider top=”no” divider_color=”#8e8e8e” link_color=”#000000″ size=”2″ margin=”5″]
- ವೈದ್ಯಾಧಿಕಾರಿಕಾರಿಗಳು ಮೂರು ತಿಂಗಳಿಗೊಮ್ಮೆ ಮಕ್ಕಳ ಆರೋಗ್ಯ ತಪಾಸಣೆ ಮಾಡುತ್ತಿಲ್ಲ. ಮೇಲ್ವಿಚಾರಕರು ನಿರಂತರವಾಗಿ ಅಂಗನವಾಡಿ ಕೇಂದ್ರಗಳಿಗೆ ಬೇಟಿ ನೀಡಿಲ್ಲ.
[su_divider top=”no” divider_color=”#8e8e8e” link_color=”#000000″ size=”2″ margin=”5″]
- ಸ್ಟೋರ್ ರೂಂನಲ್ಲಿ ಸ್ವಚ್ಚತೆಯನ್ನು ನಿರ್ವಹಣೆ ಮಾಡಿಲ್ಲ. ವಾಟರ್ ಪಿಲ್ಟರ್ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಅಂಗನಡಾಡಿ ಕೇಂದ್ರಗಳ ಸುತ್ತಲು ಸ್ವಚ್ಛತೆ ಇಲ್ಲ. ಅಳವಡಿಸಿರುವ ಯು.ಪಿ.ಎಸ್ ಸರಿಯಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ.
[su_divider top=”no” divider_color=”#8e8e8e” link_color=”#000000″ size=”2″ margin=”5″]
- ಇಂದು ತಯಾರಿಸಿದ ಉಪ್ಪಿಟ್ಟಿನಲ್ಲಿ ಯಾವುದೇ ತರಕಾರಿ ಬಳಸಿಲ್ಲ. ಕೋಹಳ್ಳಿ ಪೇಟೆ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಅವಧಿ ಮೀರಿದ ರಾಗಿ ಹಿಟ್ಟು ಬಳಸುತ್ತಿರುವುದು ಕಂಡುಬಂದಿದೆ.

[su_divider top=”no” divider_color=”#8e8e8e” link_color=”#000000″ size=”2″ margin=”5″]
- ಮೇಲಾಧಿಕಾರಿಗಳ ಮೊಬೈಲ್ ನಂಬರ್ ಮತ್ತು ಸಹಾಯವಾಣಿ ಚಾರ್ಟ್ ಹಾಕಿಲ್ಲ. ಶೌಚಾಲಯದಲ್ಲಿ ಬೆಳಕಿನ ವ್ಯವಸ್ಥೆ ಮತ್ತು ಸರಿಯಾದ ನೀರಿನ ವ್ಯವಸ್ಥೆ ಇಲ್ಲ.
[su_divider top=”no” divider_color=”#8e8e8e” link_color=”#000000″ size=”2″ margin=”5″]
- ಆಹಾರ ದಾಸ್ತಾನು ರಿಜಿಸ್ಟರ್ (ಸ್ಟಾಕ್ ರಿಜಿಸ್ಟರ್) ಮತ್ತು ಖರ್ಚಿನ ರಿಜಿಸ್ಟರ್ಗೆ ಸರಿಯಾಗಿ ಹೊಂದಾಣಿಕೆ ಆಗಲಿಲ್ಲ. ಅಂಗನವಾಡಿ ಕೇಂದ್ರದಲ್ಲಿ ಇರುವ ದಾಖಲಾತಿಗಳನ್ನು ಸರಿಯಾಗಿ ನಿರ್ವಹಿಸಿಲ್ಲ.
[su_divider top=”no” divider_color=”#8e8e8e” link_color=”#000000″ size=”2″ margin=”5″]

[su_note note_color=”#f1f1f1″ text_color=”#000000″ radius=”0″]
ರಜೆಯಂದು ಹಾಜರಾತಿ ಪುಸ್ತಕದಲ್ಲಿ ಸಹಿ
ಆಯನೂರು-01 ಅಂಗನವಾಡಿ ಕೇಂದ್ರ ಶಿಥಿಲಾವಸ್ಥೆಯಲ್ಲಿದೆ. ಆಯನೂರು -02 ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಕಾರ್ಯಕರ್ತೆ ಜೂ.7ರಂದು ಹಾಜರಾತಿ ಪುಸ್ತಕದಲ್ಲಿ ಆಕಸ್ಮಿಕ ರಜೆ ಎಂದು, ಮತ್ತು ಅಂಗನವಾಡಿ ಸಹಾಯಕಿ ಸಹಿಯನ್ನು ಮಾಡಿದ ನಮೂದು ಕಂಡುಬಂದಿದೆ. ಆದರೆ ಆ ದಿನ ಬಕ್ರಿದ್ ಹಬ್ಬದ ಸರ್ಕಾರಿ ರಜೆ ಇತ್ತು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.[/su_note]
ಲೋಕಾಯುಕ್ತ ಎಸ್.ಪಿ ಮಂಜುನಾಥ ಚೌದರಿ ಮಾರ್ಗದರ್ಶನದಲ್ಲಿ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಲಾಗಿತ್ತು. ಹಲವು ನ್ಯೂನತೆಗಳು ಕಂಡು ಬಂದಿದ್ದು, ಇನ್ನೊಂದು ವಾರದೊಳಗೆ ಮಕ್ಕಳಿಗೆ ಉತ್ತಮ ವಾತಾವರಣ ಕಲ್ಪಿಸುವಂತೆ ಲೋಕಾಯುಕ್ತ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ಭದ್ರಾವತಿ ಸಮೀಪ ರೈಲಿಗೆ ಸಿಲುಕಿ ವ್ಯಕ್ತಿ ಸಾವು, ಪತ್ತೆಯಾಗದ ಗುರುತು
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















