ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿ ಅಡ್ಡಗಟ್ಟಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಹತ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 DECEMBER 2023

SHIMOGA : ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಲಾಗಿದೆ. ಆಸ್ತಿ ವ್ಯಾಜ್ಯದ ಹಿನ್ನೆಲೆ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.

ಮೇಲಿನ ಹನಸವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳಲಕಟ್ಟೆ ಗ್ರಾಮದ ವಾಸಿ ಮಹೇಶಪ್ಪ (60) ಮೃತರು. ಬಿಕ್ಕೋನಹಳ್ಳಿಯ ಮಗಳ ಮನೆಯಿಂದ ಮಹೇಶಪ್ಪ ದ್ವಿಚಕ್ರ ವಾಹನದಲ್ಲಿ ಬೆಳಲಕಟ್ಟೆಕ್ಕೆ ತೆರಳುತ್ತಿದ್ದರು. ಈ ವೇಳೆ ಅವರನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಪೆಟ್ರೋಲ್‌ ಎರಚಿ ಬೆಂಕಿ ಹಚ್ಚಲಾಗಿದೆ ಎಂದು ಆರೋಪಿಸಲಾಗಿದೆ.

ನರಳಾಡಿ ಪ್ರಾಣ ತ್ಯಜಿಸಿದರು

ಬೆಂಕಿಯ ಕೆನ್ನಾಲಗೆಗೆ ಕೆಲವೇ ನಿಮಿಷದಲ್ಲಿ ಮಹೇಶಪ್ಪ ಸಂಪೂರ್ಣ ಸುಟ್ಟು ಹೋಗಿದ್ದರು. ಆದರೆ ಪ್ರಾಣ ಉಳಿಸಿಕೊಳ್ಳುವ ಸಲುವಾಗಿ ನೆಲದ ಮೇಲೆ ಹೊರಳಾಡಿ, ನರಳಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮಹೇಶಪ್ಪ ಅವರನ್ನು ಕೂಡಲೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಹೇಶಪ್ಪ ಕೊನೆಯುಸಿರೆಳೆದಿದ್ದರು ಎಂದು ಹೇಳಲಾಗುತ್ತಿದೆ. ಇನ್ನು, ಬೆಂಕಿಯ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ಸುಟ್ಟು ಹೋಗಿದೆ.

ಆಸ್ತಿ ವಿವಾದದ ಹಿನ್ನೆಲೆ ಕೃತ್ಯ

ಮಹೇಶಪ್ಪ ಮತ್ತು ಅವರ ಸಹೋದರ ಕುಮಾರ್‌ ಮಧ್ಯೆ ಆಸ್ತಿ ವಿವಾದವಿತ್ತು. ಇದೆ ಕಾರಣಕ್ಕೆ ಕುಮಾರ್‌ ಮತ್ತು ಆತನ ಪುತ್ರ ಕಾರ್ತಿಕ್‌ ಎಂಬುವವರು ಕೃತ್ಯ ಎಸಗಿದ್ದಾರೆ ಎಂದು ಮಹೇಶಪ್ಪ ಅವರ ಕುಟುಂಬ ಆರೋಪಿಸಿ ದೂರು ನೀಡಿದೆ.

ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ – ಭದ್ರಾವತಿಯಲ್ಲಿ ರೈಲು ಹತ್ತಿದ ಮಹಿಳೆಗೆ ಶಿವಮೊಗ್ಗದಲ್ಲಿ ಕಾದಿತ್ತು ಶಾಕ್‌, ರೈಲ್ವೆ ಪೊಲೀಸರಿಂದಾಗಿ ಸದ್ಯ ನಿರಾಳ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 3, 2023

Leave a Comment