SHIVAMOGGA LIVE NEWS | 3 DECEMBER 2023
SHIMOGA : ಬೈಕ್ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. ಆಸ್ತಿ ವ್ಯಾಜ್ಯದ ಹಿನ್ನೆಲೆ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.
ಮೇಲಿನ ಹನಸವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳಲಕಟ್ಟೆ ಗ್ರಾಮದ ವಾಸಿ ಮಹೇಶಪ್ಪ (60) ಮೃತರು. ಬಿಕ್ಕೋನಹಳ್ಳಿಯ ಮಗಳ ಮನೆಯಿಂದ ಮಹೇಶಪ್ಪ ದ್ವಿಚಕ್ರ ವಾಹನದಲ್ಲಿ ಬೆಳಲಕಟ್ಟೆಕ್ಕೆ ತೆರಳುತ್ತಿದ್ದರು. ಈ ವೇಳೆ ಅವರನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಪೆಟ್ರೋಲ್ ಎರಚಿ ಬೆಂಕಿ ಹಚ್ಚಲಾಗಿದೆ ಎಂದು ಆರೋಪಿಸಲಾಗಿದೆ.
ನರಳಾಡಿ ಪ್ರಾಣ ತ್ಯಜಿಸಿದರು
ಬೆಂಕಿಯ ಕೆನ್ನಾಲಗೆಗೆ ಕೆಲವೇ ನಿಮಿಷದಲ್ಲಿ ಮಹೇಶಪ್ಪ ಸಂಪೂರ್ಣ ಸುಟ್ಟು ಹೋಗಿದ್ದರು. ಆದರೆ ಪ್ರಾಣ ಉಳಿಸಿಕೊಳ್ಳುವ ಸಲುವಾಗಿ ನೆಲದ ಮೇಲೆ ಹೊರಳಾಡಿ, ನರಳಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮಹೇಶಪ್ಪ ಅವರನ್ನು ಕೂಡಲೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಹೇಶಪ್ಪ ಕೊನೆಯುಸಿರೆಳೆದಿದ್ದರು ಎಂದು ಹೇಳಲಾಗುತ್ತಿದೆ. ಇನ್ನು, ಬೆಂಕಿಯ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ಸುಟ್ಟು ಹೋಗಿದೆ.
ಆಸ್ತಿ ವಿವಾದದ ಹಿನ್ನೆಲೆ ಕೃತ್ಯ
ಮಹೇಶಪ್ಪ ಮತ್ತು ಅವರ ಸಹೋದರ ಕುಮಾರ್ ಮಧ್ಯೆ ಆಸ್ತಿ ವಿವಾದವಿತ್ತು. ಇದೆ ಕಾರಣಕ್ಕೆ ಕುಮಾರ್ ಮತ್ತು ಆತನ ಪುತ್ರ ಕಾರ್ತಿಕ್ ಎಂಬುವವರು ಕೃತ್ಯ ಎಸಗಿದ್ದಾರೆ ಎಂದು ಮಹೇಶಪ್ಪ ಅವರ ಕುಟುಂಬ ಆರೋಪಿಸಿ ದೂರು ನೀಡಿದೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದಿ – ಭದ್ರಾವತಿಯಲ್ಲಿ ರೈಲು ಹತ್ತಿದ ಮಹಿಳೆಗೆ ಶಿವಮೊಗ್ಗದಲ್ಲಿ ಕಾದಿತ್ತು ಶಾಕ್, ರೈಲ್ವೆ ಪೊಲೀಸರಿಂದಾಗಿ ಸದ್ಯ ನಿರಾಳ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200