ಹೊಳೆಹೊನ್ನೂರು: ಚಿಕ್ಕೂಡ್ಲಿ ಬಳಿ ಭದ್ರಾ ನದಿಗೆ ನೂತನವಾಗಿ ನಿರ್ಮಿಸಿರುವ ಸೇತುವೆ ಮತ್ತು ಹೊಳೆಹೊನ್ನೂರು ರಿಂಗ್ ರಸ್ತೆಯನ್ನು (Ring Road) ಸಂಸದ ಬಿ.ವೈ.ರಾಘವೇಂದ್ರ ಲೋಕಾರ್ಪಣೆ ಮಾಡಿದರು.
ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಿದರು.
ಸಂಸದ ರಾಘವೇಂದ್ರ ಹೇಳಿದ್ದೇನು?
- ಆರು ವರ್ಷದ ಹಿಂದೆ ಪ್ರಾರಂಭವಾದ ಶಿವಮೊಗ್ಗ – ಚಿತ್ರದುರ್ಗ ಹೆದ್ದಾರಿ ಕಾಮಗಾರಿಯನ್ನು ಮೊದಲಿದ್ದ ಹೈದರಾಬಾದ್ ಗುತ್ತಿಗೆದಾರ ಸ್ವಲ್ಪ ಭಾಗವನ್ನು ಮಾತ್ರ ಮಾಡಿ ಇನ್ನೂ 100 ಕೋಟಿ ರೂ. ವೆಚ್ಚದ ಕಾಮಗಾರಿ ಅರ್ಧಕ್ಕೆ ಬಿಟ್ಟು ಹೋಗಿದ್ದರು. ನಂತರ ಹೆಚ್ಚುವರಿಯಾಗಿ 418 ಕೋಟಿ ರೂ. ಅನುದಾನ ನೀಡಿ ಕಾಮಗಾರಿ ಪ್ರಾರಂಭಿಸಲಾಯಿತು.
- ಚಿತ್ರದುರ್ಗ, ಚನ್ನಗಿರಿ, ಹೊಳೆಹೊನ್ನೂರು ಮತ್ತು ಶಿವಮೊಗ್ಗ ನಗರದಲ್ಲಿ ಬೈಪಾಸ್ ರಸ್ತೆ ನಿರ್ಮಾಣ, ಚಿತ್ರದುರ್ಗ, ಹೊಳಲ್ಕೆರೆ, ಶಿವಮೊಗ್ಗ ನಗರಕ್ಕೆ ರೈಲ್ವೆ ಮೇಲ್ಸೇತುವೆ, ಭದ್ರಾನದಿಗೆ ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ಒಟ್ಟು 518 ಕೋಟಿ ರೂ. ವೆಚ್ಚ ಮಾಡಲಾಗಿದೆ.
- ಅಂದಾಜು 5 ವರ್ಷಗಳಲ್ಲಿ ಶಿವಮೊಗ್ಗ ಜಿಲ್ಲೆಗೆ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ 10 ರಿಂದ 15 ಸಾವಿರ ಕೋಟಿ ರೂ. ಅನುದಾನ ನೀಡಿದೆ.
ಬೈಪಾಸ್ ರಸ್ತೆ ನಿರ್ಮಾಣ ಹಂತದಲ್ಲಿರುವಾಗಲೇ ಅಪಘಾತಕ್ಕೀಡಾಗಿ ಮೃತಪಟ್ಟ ಪಟ್ಟಣದ ಪುಟ್ಟಪ್ಪ ಅವರ ಮನೆಗೆ ಸಂಸದ ರಾಘವೇಂದ್ರ ಭೇಟಿ ನೀಡಿದ್ದರು. ಕುಟುಂಬಕ್ಕೆ ಸಾಂತ್ವನ ಹೇಳಿದರು. 25 ಸಾವಿರ ರೂ. ನೆರವು ನೀಡಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ ಸರ್ಜಿ, ಡಿ.ಎಸ್.ಅರುಣ್, ಭಾರತಿ ಶೆಟ್ಟಿ, ದತ್ತಾತ್ರಿ, ಮಾಜಿ ಶಾಸಕ ಕೆ.ಜಿ.ಕುಮಾರಸ್ವಾಮಿ, ವೀರಭದ್ರಪ್ಪ ಪೂಜಾರಿ, ಶ್ರೀನಿವಾಸ್, ಮಲ್ಲೇಶಪ್ಪ, ಎ.ಕೆ.ರಮೇಶ್, ಕೆ.ಪಿ.ಕಿರಣ್ ಕುಮಾರ್, ರಾಜೇಶ್ ಪಟೇಲ್, ಕಲ್ಲಜ್ಜನಾಳ್ ಮಂಜುನಾಥ, ಸುಬ್ರಮಣಿ, ಕಿರಣ್, ಕುಮಾರ ನಾಯ್ಡು, ಯು.ವೆಂಕಟೇಶ್ ಸೇರಿ ಇನ್ನಿತರಿದ್ದರು.
ಇದನ್ನೂ ಓದಿ » ಮುಂದಿನ ಏಳು ದಿನ ಶಿವಮೊಗ್ಗ ಜಿಲ್ಲೆಗೆ ಸಾಲು ಸಾಲು ಎಚ್ಚರಿಕೆ, ಯಾವ್ಯಾವ ದಿನ ಎಷ್ಟಿರುತ್ತೆ ಮಳೆ?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200