ರಾತ್ರೋರಾತ್ರಿ ಹಾಡೋನಹಳ್ಳಿಯಲ್ಲಿ ಅಧಿಕಾರಿಗಳ ದಾಳಿ, ಅಬ್ಬಲಗೆರೆ ಬಳಿ ಟಿಪ್ಪರ್‌ ಸೀಜ್‌, ಕಾರಣವೇನು?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS, 5 FEBRUARY 2025

ಶಿವಮೊಗ್ಗ : ಅಕ್ರಮವಾಗಿ ಮರಳು (Sand) ಸಾಗಣೆ ಮಾಡುತ್ತಿದ್ದ ಆರೋಪದ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಕಳೆದ ರಾತ್ರಿ ದಿಢೀರ್‌ ದಾಳಿ ನಡೆಸಿದ್ದಾರೆ. ಈ ಸಂದರ್ಭ ಅಧಿಕಾರಿಗಳನ್ನು ಕಂಡು ಮರಳು ಸಾಗಿಸುತ್ತಿದ್ದ ಟ್ರಾಕ್ಟರ್‌ ನಿಲ್ಲಿಸದೆ ಪರಾರಿಯಾಗಿದ್ದಾನೆ. ಆದರೆ ಜೆಸಿಬಿಯೊಂದು ಸಿಕ್ಕಿಬಿದ್ದಿದೆ.

ಶಿವಮೊಗ್ಗ ತಾಲೂಕು ಹಾಡೋನಹಳ್ಳಿಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ನದಿಯಲ್ಲಿ ಅಕ್ರಮವಾಗಿ ಮರಳು ತೆಗೆದು ಸಾಗಿಸುತ್ತಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿದ್ದರು. ದಾಳಿಯ ಮಾಹಿತಿ ದೊರೆತ ಹಿನ್ನೆಲೆ ಟ್ರಾಕ್ಟರ್‌ ಚಾಲಕ ವೇಗವಾಗಿ ಟ್ರಾಕ್ಟರ್‌ ನುಗ್ಗಿಸಿ ಪರಾರಿಯಾಗಿದ್ದಾನೆ. ಇದರ ಹಿಂದೆಯೇ ಬಂದ ಜೆಸಿಬಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

mines-and-geology-department-officers-raid-at-hadonahalli sand

ಮರಳು ತುಂಬಿದ್ದ ಟಿಪ್ಪರ್‌ ವಶಕ್ಕೆ

ಇನ್ನು, ಮರಳು ತುಂಬಿಕೊಂಡು ರಸ್ತೆ ಬದಿ ನಿಂತಿದ್ದ ಟಿಪ್ಪರ್‌ ಲಾರಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಪರಿಶೀಲಿಸಿದರು. ಮರಳು ಸಾಗಾಣೆಗೆ ಅಗತ್ಯ ದಾಖಲೆ ಇಲ್ಲದ ಹಿನ್ನೆಲೆ ಟಿಪ್ಪರ್‌ ಲಾರಿ ವಶಪಡಿಸಿಕೊಂಡಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ 2 ದಿನ ಸಾಹಿತ್ಯ ಸಮ್ಮೇಳನ, ಉದ್ಘಾಟನೆಗೆ ನಾಗತಿಹಳ್ಳಿ ಚಂದ್ರಶೇಖರ್‌, ಏನೆಲ್ಲ ಕಾರ್ಯಕ್ರಮ ಇರುತ್ತೆ?

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment