ಗ್ರಾಮ ಪಂಚಾಯಿತಿ ಅಧ್ಯಕ್ಷೆ, ಉಪಾಧ್ಯಕ್ಷೆ, ಸದಸ್ಯರು, ಗ್ರಾಮಸ್ಥರಿಂದ ಇಡೀ ರಾತ್ರಿ ಧರಣಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ
SHIVAMOGGA LIVE NEWS | 21 DECEMBER 2022
 ಸುದ್ದಿಯ ಹಿನ್ನೆಲೆ 
ಚೋರಡಿ ಗ್ರಾಮದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಒತ್ತುವರಿ ಮಾಡಿಕೊಂಡವರು ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸುತ್ತಿದ್ದರು. ಈ ವೇಳೆ ಮಹಿಳೆಯೊಬ್ಬರು ವಿಷ ಸೇವಿಸಿದ್ದಾರೆ. ವಿಷಯ ತಿಳಿದು ಜಿಲ್ಲಾ ಪಂಚಾಯಿತಿ ಸಿಇಒ ಅವರು ಗ್ರಾಮ ಪಂಚಾಯಿತಿ ಪಿಡಿಒ ಅವರನ್ನು ಅಮಾನತು ಮಾಡಿದ್ದರು.

ಶಿವಮೊಗ್ಗ : ಗ್ರಾಪಂ ಪಿಡಿಒ ಅವರನ್ನು ಕಾರಣವೇ ಇಲ್ಲದೇ ಜಿಪಂ ಸಿಇಒ ಅಮಾನತು ಮಾಡಿದ್ದಾರೆ. ಜಿಲ್ಲಾ ಪಂಚಾಯಿತಿ ಸಿಇಒ ಸ್ಥಳಕ್ಕೆ ಆಗಮಿಸಿ ಅಮಾನತು ಹಿಂದಕ್ಕೆ ಪಡೆಯುವವರೆಗೆ ಗ್ರಾಪಂ ಕಚೇರಿ ಬೀಗ ತೆರೆಯಲೂ ಬಿಡುವುದಿಲ್ಲ ಎಂದು ಗ್ರಾಪಂ ಸದಸ್ಯರು ಮತ್ತು ಸಾರ್ವಜನಿಕರು ಅಹೋರಾತ್ರಿ ಧರಣಿ ನಡೆಸಿದರು.
ತಾಲೂಕಿನ ಚೋರಡಿ ಗ್ರಾಪಂ ಆವರಣದಲ್ಲಿ ಸದಸ್ಯರು ಅರ್ನಿದಿಷ್ಟಾವಧಿ ಧರಣಿ (over night protest) ನಡೆಸಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga Nanjappa Hospital

ಗ್ರಾಮದಲ್ಲಿ ಪಶು ಆಸ್ಪತ್ರೆ ನಿರ್ಮಾಣ ಸಂಬಂಧ ಹಿಂದೆಯೇ ಜಾಗ ಗುರುತಿಸಲಾಗಿದೆ. ಆ ಜಾಗವನ್ನು ಸ್ವಚ್ಛ ಮಾಡಲು ಎಲ್ಲಾ ಗ್ರಾಪಂ ಸದಸ್ಯರು ಪಿಡಿಒ ಜೊತೆಗೆ ಸೋಮವಾರ ತೆರಳಿದ್ದೆವು. ಅಲ್ಲಿ ಕೆಲವರು ಒತ್ತುವರಿ ಕೂಡ ಮಾಡಿದ್ದಾರೆ. ಆದರೆ ಒತ್ತುವರಿ ಜಾಗದ ವಿಚಾರಕ್ಕೆ ಹೋಗದೇ ಖಾಲಿ ಇರುವ ಜಾಗವನ್ನು ಮಾತ್ರ ಸ್ವಚ್ಛ ಮಾಡಲಾಗಿದೆ ಎಂದು ತಿಳಿಸಿದರು.

ಈ ವೇಳೆ ಒತ್ತುವರಿ ಮಾಡಿಕೊಂಡಿರುವ ಚಂದ್ರಕಲಾ ಎಂಬ ಮಹಿಳೆ ವಿಷ ಕುಡಿದಂತೆ ಮಾಡಿದ್ದಾರೆ. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿದೆ. ಅದೇ ವೇಳೆ ದಲಿತ ಸಂಘರ್ಷ ಸಮಿತಿಯವರು ಜಿಪಂ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಅಷ್ಟಕ್ಕೇ ಜಿಪಂ ಸಿಇಒ, ಗ್ರಾಪಂ ಪಿಡಿಒ ಅವರನ್ನು ಅಮಾನತು ಮಾಡಿದ್ದಾರೆ ಎಂದು ಆಕ್ರೋಶ (over night protest) ವ್ಯಕ್ತಪಡಿಸಿದರು.

ಒಂದೇ ವಾರದಲ್ಲಿ ಎರಡು ಬಾರಿ ಪಿಡಿಒ ಅವರನ್ನು ಅಮಾನತು ಮಾಡಲಾಗಿದೆ. ಪಿಡಿಒ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರೂ ಅಮಾನತು ಮಾಡಿರುವುದು ಸರಿಯಲ್ಲ. ಕೂಡಲೇ ಜಿಪಂ ಸಿಇಒ ಗ್ರಾಮಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಬೇಕು. ಅಲ್ಲಿಯವರೆಗೂ ಧರಣಿ ಹಿಂಪಡೆಯುವುದಿಲ್ಲ. ಗ್ರಾಪಂ ಕಚೇರಿ ಬಾಗಿಲನ್ನೂ ತೆರೆಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ – ಸಿಬಿಐ ದಾಳಿಗೆ ಖಂಡನೆ, ಶಿವಮೊಗ್ಗದಲ್ಲಿ ಮೆರವಣಿಗೆ, ಕೇಂದ್ರದ ವಿರುದ್ಧ ಪ್ರತಿಭಟನೆ

ಗ್ರಾಪಂ ಅಧ್ಯಕ್ಷೆ ಸುಧಾ ಆಂಜನೇಯ, ಉಪಾಧ್ಯಕ್ಷೆ ಶಾರದಮ್ಮ ಹೂವಪ್ಪ, ಸದಸ್ಯರಾದ ನಿರಂಜನ ಗೌಡ, ರಾಜೇಶ್, ಅಶೋಕ, ಶಿವಕುಮಾರ್ ಸೇರಿದಂತೆ ಎಲ್ಲಾ ಸದಸ್ಯರು, ಗ್ರಾಮಸ್ಥರು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.

Shimoga Nanjappa Hospital

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment