BREAKING NEWS | ಮದುವೆ ಮನೆಯಲ್ಲಿ ಊಟ ಮಾಡಿದ ಹಲವರಲ್ಲಿ ವಾಂತಿ, ಭೇದಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ನವೆಂಬರ್ 2021

ಮದುವೆ ಸಮಾರಂಭವೊಂದರಲ್ಲಿ ಊಟ ಮಾಡಿದ್ದ ಹಲವರಲ್ಲಿ ವಾಂತಿ, ಭೇದಿ, ತಲೆನೋವು ಕಾಣಿಸಿಕೊಂಡಿದೆ. ಕೂಡಲೆ ಎಲ್ಲರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ.

ಶಿವಮೊಗ್ಗ ತಾಲೂಕು ಆಲದಹಳ್ಳಿಯ ಸಮುದಾಯ ಭವನದಲ್ಲಿ ಇವತ್ತು ಮದುವೆ ಸಮಾರಂಭ ಆಯೋಜಿಸಲಾಗಿತ್ತು. ಎರಡು ಜೋಡಿ ಸಪ್ತಪದಿ ತುಳಿದಿವೆ. ಮಹೂರ್ತ ಮುಗಿಯುತ್ತಿದ್ದಂತೆ ಊಟದ ವ್ಯವಸ್ಥೆ ಮಾಡಲಾಗಿತ್ತು.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ಊಟವಾಗುತ್ತಿದ್ದಂತೆ ಹಲವರು ಅಸ್ವಸ್ಥ

ಮದುವೆ ಸಮಾರಂಭದಲ್ಲಿ ಊಟ ಮಾಡಿದ ಹಲವರು ಅಸ್ವಸ್ಥರಾಗಿದ್ದಾರೆ. ಕೂಡಲೆ ಅವರನ್ನು ಹೊಳಲೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಯಿತು. ವಾಂತಿ, ಭೇದಿ, ತಲೆನೋವು ಸೇರಿದಂತೆ ಹಲವು ಸಮಸ್ಯೆ ಹೆಚ್ಚಾದ ಹಿನ್ನೆಲೆ ಕೆಲವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮದುವೆ ಮನೆಗೆ ಅಧಿಕಾರಿಗಳು ದೌಡು

ಇನ್ನು, ವಿಚಾರ ತಿಳಿಯುತ್ತಿದ್ದಂತೆ ಮದುವೆ ಮನೆಗೆ ಅಧಿಕಾರಿಗಳು ದೌಡಾಯಿಸಿದ್ದಾರೆ. ತಯಾರಿಸಿದ್ದ ಆಹಾರ ಸ್ಯಾಂಪಲ್ ಸಂಗ್ರಹ ಮಾಡಲಾಗಿದೆ. ಅವುಗಳನ್ನು ಲ್ಯಾಬ್’ಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment