ಶಿವಮೊಗ್ಗ LIVE
SHIVAMOGGA LIVE NEWS | 26 ಮಾರ್ಚ್ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕರುವನ್ನ ಕತ್ತರಿಸಲು ಅಣಿಯಾಗಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಖಾಕಿ ಪಡೆಯನ್ನು ಕಂಡು ಮೂವರು ಪರಾರಿಯಾಗಿದ್ದು, ಕರುವನ್ನು ರಕ್ಷಣೆ ಮಾಡಲಾಗಿದೆ.
ಶಿವಮೊಗ್ಗದ ಗೋವಿಂದಾಪುರ ಗ್ರಾಮದ ಜಮೀನು ಒಂದರಲ್ಲಿ ಘಟನೆ ಸಂಭವಿಸಿದೆ. ಜಮೀನು ಮಾಲೀಕ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.
ಏನಿದು ಪ್ರಕರಣ?
ಗೋವಿಂದಾಪುರದ ಜಮೀನಿನಲ್ಲಿ ಕರು ಒಂದನ್ನು ಕಡಿಯಲು ಮುಂದಾಗಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ತುಂಗಾ ನಗರ ಠಾಣೆ ಪಿಎಸ್ಐ ಶಿವಪ್ರಸಾದ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ಲಿಯಾಕತ್ ಎಂಬುವವರಿಗೆ ಸೇರಿದ ಜಮೀನನಲ್ಲಿ ರಾತ್ರಿ ಕರುವನ್ನು ಕಡಿಯಲು ಸಿದ್ಧತೆ ನಡೆಸಲಾಗಿತ್ತು. ಪೊಲೀಸರು ದಾಳಿ ನಡೆಸುತ್ತಿದ್ದಂತೆ ಕರುವನ್ನು ಪಕ್ಕದ ಗುಂಡಿಗೆ ತಳ್ಳಿ ಮೂವರು ಪರಾರಿಯಾಗಿದ್ದಾರೆ. ಗುಂಡಿಗೆ ಬಿದ್ದಿದ್ದ ಕರುವನ್ನ ಪೊಲೀಸರು ರಕ್ಷಣೆ ಮಾಡಿದ್ದಾರೆ.
ಸ್ಥಳದಲ್ಲಿ ಒಂದು ಚಾಕು, ತಗಡಿನ ಶೀಟ್, ಒಂದು ಮಚ್ಚು, ಪ್ಲಾಸ್ಟಿಕ್ ಕ್ರೇಟ್ ವಶಕ್ಕೆ ಪಡೆಯಲಾಗಿದೆ.
ಪರಾರಿಯಾದವರ ಗುರುತು ಪತ್ತೆ
ಪೊಲೀಸರ ದಾಳಿ ವೇಳೆ ಪರಾರಿಯಾದ ಮೂವರ ಗುರುತು ಪತ್ತೆಯಾಗಿದೆ. ಶಿವಮೊಗ್ಗದ ಇಮ್ರಾನ್ ಅಲಿಯಾಸ್ ಗಿಡ್ಡಿ, ಸಿರಾಜ್, ಸದ್ದಾಂ ಎಂದು ಗುರುತಿಸಲಾಗಿದೆ. ಈ ಮೂವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಜಮೀನು ಮಾಲೀಕ ಲಿಯಾಖತ್ ಎಂಬಾತನ ವಿರುದ್ಧವು ಎಫ್ಐಆರ್ ಮಾಡಲಾಗಿದೆ.
ಪಿಎಸ್ಐ ಶಿವಪ್ರಸಾದ್ ನೇತೃತ್ವದಲ್ಲಿ ಸಿಬ್ಬಂದಿ ಕಿರಣ್ ಮೋರೆ, ರಾಜು, ನಾಗರಾಜ್ ಅವರು ದಾಳಿಯಲ್ಲಿ ಪಾಲ್ಗೊಂಡಿದ್ದರು. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






