NEWS HIGHLIGHTS
ಶಿವಮೊಗ್ಗ: ತಾಲೂಕಿನ ಗಾಜನೂರು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜೂನ್ 23 ರಂದು ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಗಾಜನೂರು, ಕ್ಯಾಂಪ್ ಮತ್ತು ಡ್ಯಾಂ, ಸಕ್ಕರೆಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲ ಲಕ್ಕವಳ್ಳಿ, ಕಡೇಕಲ್, ಯರಗನಾಳ್, ಕುನ್ನೂರು, ವೀರಾಪುರ, ತಟ್ಟಿಕೆರೆ, ಹೊಸಕೊಪ್ಪ, ಇಂದಿರಾನಗರ ಹೊಸಹಳ್ಳಿ, ಮುಲ್ಕೆರೆ, ಆನೆ ಬಿಡಾರ, ತಿಮ್ಮಾಪುರ ಹಾಗೂ ಸುತ್ತಮುತ್ತಲಿನ ಗ್ರಾಮ.
