ಶಿವಮೊಗ್ಗ ಲೈವ್.ಕಾಂ | SHIMOGA | 1 ಫೆಬ್ರವರಿ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಅನುಪಿನಕಟ್ಟೆಯ ಕಸ ವಿಲೇವಾರಿ ಘಟಕದಿಂದ ಪುರದಾಳು ಗ್ರಾಮದವರೆಗಿನ ರಸ್ತೆ ಕಾಮಗಾರಿಗೆ ಇವತ್ತು ಗುದ್ದಲಿ ಪೂಜೆ ನೆರವೇರಿಸಲಾಯಿತು. ಆದರೆ ಈ ವೇಳೆ ಫ್ಲೆಕ್ಸ್’ನಲ್ಲಿ ಫೋಟೊ ಬಳಸದೆ ಇರುವುದಕ್ಕೆ ಶಿವಮೊಗ್ಗದ ಮಾಜಿ ಮೇಯರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ್, ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಮಾಜಿ ಮೇಯರ್ ಲತಾ ಗಣೇಶ್, ಮಾಜಿ ಉಪ ಮೇಯರ್ ಚನ್ನಬಸಪ್ಪ ಅವರು ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 2.45 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ.
ಇನ್ನು ಕಾಮಗಾರಿಯ ಗುದ್ದಲಿ ಪೂಜೆ ಸ್ಥಳದಲ್ಲಿ ಹಾಕಲಾಗಿದ್ದ ಫ್ಲೆಕ್ಸ್’ನಲ್ಲಿ, ಮಾಜಿ ಮೇಯರ್ ಲತಾ ಗಣೇಶ್ ಅವರ ಭಾವಚಿತ್ರ ಮಾಯವಾಗಿತ್ತು. ಇದು ಲತಾ ಗಣೇಶ್ ಅವರ ಅಸಮಾಧಾನಕ್ಕೆ ಕಾರಣವಾಯಿತು. ತಮ್ಮ ಅವಧಿಯಲ್ಲಿ ಕಾಮಗಾರಿಗೆ ಹಣ ಮಂಜೂರಾಗಿದೆ. ಆದರೆ ಫ್ಲೆಕ್ಸ್’ನಲ್ಲಿ ತಮ್ಮ ಹೊರತು ಉಳಿದೆಲ್ಲರ ಭಾವಚಿತ್ರವಿದೆ ಎಂದು ಸಿಟ್ಟಾದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು





