SHIMOGA, 6 AUGUST 2024 : ಮನೆಯೊಂದರ ಹಿಂಬದಿ ಹುಲ್ಲಿನ ಪಿಂಡಿಗಳ ಅಡಿ ಅವಿತಿದ್ದ ಹೆಬ್ಬಾವನ್ನು (python) ಉರಗ ರಕ್ಷಕ ಸ್ನೇಕ್ ಕಿರಣ್ ರಕ್ಷಣೆ ಮಾಡಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯ ಕುರುಬರ ಪಾಳ್ಯದಲ್ಲಿ ಹಾವು ಪತ್ತೆಯಾಗಿತ್ತು.
ಸುಹಾಸ್ ಎಂಬುವವರ ಮನೆ ಹಿಂಬದಿ ಹುಲ್ಲಿನ ಪಿಂಡಿಗಳನ್ನು ಇಟ್ಟಿದ್ದರು. ಬೆಳಗ್ಗೆ ಹಸುಗಳಿಗೆ ಹುಲ್ಲು ತರಲು ಹೋದಾಗ ಹಾವು ಕಾಣಿಸಿತ್ತು. ವಿಷಯ ತಿಳಿದು ಸ್ಥಳಕ್ಕೆ ತೆರಳಿದ್ದ ಸ್ನೇಕ್ ಕಿರಣ್ ಸುಮಾರು ಏಳೂವರೆ ಅಡಿ ಉದ್ದದ ಹೆಬ್ಬಾವು ರಕ್ಷಣೆ ಮಾಡಿದ್ದಾರೆ. ಈ ಹಾವು 7 ಕೆ.ಜೆ 700 ಗ್ರಾಮ್ ತೂಕವಿತ್ತು. ಶಂಕರ ವಲಯ ಅರಣ್ಯಾಧಿಕಾರಿಗಳ ಸಮ್ಮುಖದಲ್ಲಿ ಹೆಬ್ಬಾವನ್ನು ಸಮೀಪದ ಅರಣ್ಯಕ್ಕೆ ಬಿಡಲಾಗಿದೆ.

ಇದನ್ನೂ ಓದಿ ⇓
ತ್ಯಾವರೆಕೊಪ್ಪ ಮೃಗಾಲಯದ ಆರ್ಯ ಇನ್ನಿಲ್ಲ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
