ಗೋದಾಮಿನ ಮೇಲೆ ಅಧಿಕಾರಿಗಳ ದಾಳಿ, ಅಡಿಕೆ ಮುಟ್ಟುಗೋಲು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಹೊಳೆಹೊನ್ನೂರು : ತೆರಿಗೆ ಇಲಾಖೆ ಅಧಿಕಾರಿಗಳು ಗೋದಾಮಿನ (Godown) ಮೇಲೆ ದಾಳಿ ಮಾಡಿ 23 ಕ್ವಿಂಟಾಲ್‌ ಅಡಿಕೆ ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ರೈತರು ಅಧಿಕಾರಿಗಳ ಜೊತೆಗೆ ಮಾತಿನ ಚಕಮಕಿ ನಡೆಸಿದ್ದಾರೆ.
➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಅರಹತೊಳಲು ಕೈಮರ ಗ್ರಾಮದಲ್ಲಿರುವ ಖಾಸಗಿ ಗೊದಾಮಿನ (Godown) ಮೇಲೆ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲಿಸಿದರು. ದಾಖಲೆಗಳ ವ್ಯತ್ಯಾಸದ ಆರೋಪದ ಹಿನ್ನೆಲೆ ಗೋದಾಮಿನಲ್ಲಿದ್ದ 23 ಕ್ವಿಂಟಾಲ್‌ ಅಡಿಕೆ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಡಿವೈಎಸ್‌ಪಿಯನ್ನು ವಶಕ್ಕೆ ಪಡೆದ ಲೋಕಾಯುಕ್ತ, ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

raid-on-areca-godown-at-arahatolalu

ಗೋದಾಮಿನ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು. ರೈತರ ಬೆಳೆಗೆ ತೆರಿಗೆ ವಿಧಿಸುವುದಿಲ್ಲ. ನಮ್ಮ ಮನೆಗಳ ಬಳಿ ಸ್ಥಳಾವಕಾಶ ಇಲ್ಲದಿದ್ದರಿಂದ ಅಡಿಕೆಯನ್ನು ಗೋದಾಮಿನಲ್ಲಿ ಇರಿಸಲಾಗಿದೆ. ಇದನ್ನು ವಶಕ್ಕೆ ಪಡೆಯುತ್ತಿರುವುದು ಸರಿಯಾದ ಕ್ರಮವಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment