ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 7 JUNE 2023
SHIMOGA : ಹೊನ್ನಾಳಿ ರಸ್ತೆಯಲ್ಲಿ (Road) ಸೋಮವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತಕ್ಕೆ ಕಾರಣ ಬಯಲಾಗಿದೆ. ರಸ್ತೆಯಲ್ಲಿ ದನ ಅಡ್ಡ ಬಂದಿದ್ದರಿಂದ ಘಟನೆ ಸಂಭವಿಸಿದೆ ಎಂದು ಎಫ್ಐಅರ್ನಲ್ಲಿ ತಿಳಿಸಲಾಗಿದೆ.

ಜೂ.5ರಂದು ಶಿವಮೊಗ್ಗ – ಹೊನ್ನಾಳಿ ರಸ್ತೆಯಲ್ಲಿ (Road) ಕಾರು ಮರಕ್ಕೆ ಡಿಕ್ಕಿಯಾಗಿ ಚಾಲಕ ಶರತ್ ಕುಮಾರ್ (34) ಮೃತಪಟ್ಟಿದ್ದರು. ಕಾರಿನಲ್ಲಿದ್ದ ಅವರ ಪತ್ನಿ ಪ್ರೀತಿ ಮತ್ತು ನಾಲ್ಕು ವರ್ಷ ಮಗ ಕುಶಾಲ್ಗೆ ಸಣ್ಣಪುಟ್ಟ ಗಾಯವಾಗಿತ್ತು.
ಇದನ್ನೂ ಓದಿ – ಶಿವಮೊಗ್ಗ – ಸಾಗರ ರಸ್ತೆಯಲ್ಲಿ ಇನ್ನೋವಾ, ಬೈಕ್ ಮುಖಾಮುಖಿ ಡಿಕ್ಕಿ, ಸಿಸಿಟಿವಿ ದೃಶ್ಯ ಹೇಳಿತು ಸಾಕ್ಷಿ
ಶರತ್ ಕುಮಾರ್ ಕುಟುಂಬ ಸಹಿತ ಶಿವಮೊಗ್ಗದ ಆಸ್ಪತ್ರೆಗೆ ಬಂದಿದ್ದರು. ಮಧ್ಯಾಹ್ನ ಶಿವಮೊಗ್ಗದಿಂದ ಹೊನ್ನಾಳಿ ತಾಲೂಕು ಸುಂಕದಕಟ್ಟೆ ಗ್ರಾಮದಲ್ಲಿರುವ ಮನೆಗೆ ಮರಳುತ್ತಿದ್ದರು. ಶಿವಮೊಗ್ಗ ತಾಲೂಕು ಸೂಗೂರು ಗ್ರಾಮದಿಂದ ಸುಮಾರು ಒಂದೂವರೆ ಕಿ.ಮೀ ಮುಂದೆ ರಸ್ತೆಯಲ್ಲಿ ದನ ಅಡ್ಡ ಬಂದಿದೆ ಎಂದು ಆರೋಪಿಸಲಾಗಿದೆ. ದನಕ್ಕೆ ಕಾರು ಡಿಕ್ಕಿ ಆಗುವುದನ್ನು ತಲ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿLATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು













