ಶಿವಮೊಗ್ಗ ಲೈವ್.ಕಾಂ | SHIMOGA NEWS | 17 MAY 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಹಳ್ಳಿ ಹಳ್ಳಿಯಲ್ಲೂ ಸೋಂಕು ಹರಡವುದನ್ನು ತಡೆಯಲು ಗ್ರಾಮಸ್ಥರೆ ಸ್ವಯಂ ನಿರ್ಬಂಧಗಳನ್ನು ವಿಧಿಸಿಕೊಳ್ಳುತ್ತಿದ್ದಾರೆ. ಶಿವಮೊಗ್ಗ ತಾಲೂಕಿನ ಹಳ್ಳಿಯೊಂದು ಕೋವಿಡ್ ಸೋಂಕು ವ್ಯಾಪಕಗೊಳ್ಳುವುದನ್ನು ತಡೆಯಲು ಸ್ವಯಂ ಲಾಕ್ ಡೌನ್ ವಿಧಿಸಿಕೊಂಡಿದೆ.
ಗ್ರಾಮದಲ್ಲಿ 40ಕ್ಕೂ ಹೆಚ್ಚು ಮಂದಿಯಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಅಲ್ಲದೆ ಊರಿನ ಪ್ರಮುಖರೊಬ್ಬರು ಕೋವಿಡ್ಗೆ ತುತ್ತಾಗಿ ಮೃತರಾಗಿದ್ದಾರೆ. ಆ ಬಳಿಕ ಗ್ರಾಮಸ್ಥರು ಸಭೆ ಸೇರಿ, ಒಂದು ವಾಹನ ಸ್ವಯಂ ನಿರ್ಬಂಧ ವಿಧಿಸಿಕೊಂಡಿದ್ದಾರೆ.
ಹೇಗಿದೆ ಸ್ವಯಂ ನಿರ್ಬಂಧ?
ಶಿವಮೊಗ್ಗ ತಾಲೂಕು ಹಾರನಹಳ್ಳಿ ಹೋಬಳಿಯ ನಾರಾಯಣಪುರ ಗ್ರಾಮದಲ್ಲಿ ಸ್ವಯಂ ಲಾಕ್ ಡೌನ್ ವಿಧಿಸಿಕೊಳ್ಳಲಾಗಿದೆ. ಗ್ರಾಮದಲ್ಲಿ ಸೋಂಕು ಕಡಿಮೆಯಾಗುವವರೆಗೆ ಲಾಕ್ ಡೌನ್ ಮುಂದುವರೆಯಲಿದೆ ಎಂದು ಗ್ರಾಮದ ಮುಖಂಡರಲ್ಲಿ ಒಬ್ಬರಾದ ಕುಮಾರ್ ನಾಯ್ಕ ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದ್ದಾರೆ.
ಇದನ್ನೂ ಓದಿ | ಶಿವಮೊಗ್ಗ ನಗರದಲ್ಲಿ ಕಠಿಣ ಲಾಕ್ಡೌನ್ ಮುಂದುವರಿಕೆ
ನಾರಾಯಣಪುರದಲ್ಲಿ ಸುಮಾರು 350 ಮನೆಗಳಿವೆ. ಒಂದೂವರೆ ಸಾವಿರದಷ್ಟು ಜನಸಂಖ್ಯೆ ಇದೆ. ಸದ್ಯ 40 ರಿಂದ 45 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಸುಮಾರು ಹತ್ತು ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರೋನಾಗೆ ತುತ್ತಾಗಿದ್ದ ಗ್ರಾಮದ ಪ್ರಮುಖರಾದ ಹೇಮ್ಲಾನಾಯ್ಕ ಆವರು ಮೃತರಾಗಿದ್ದಾರೆ. ಇದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಇದೆ ಕಾರಣಕ್ಕೆ ಸಭೆ ಸೇರಿ ಸ್ವಯಂ ಲಾಕ್ ಡೌನ್ಗೆ ಒಳಗಾಗಿದ್ದಾರೆ.
ಅಗತ್ಯ ವಸ್ತು ಖರೀದಿಗೆ ಸಮಯ ನಿಗದಿ
ಪ್ರತಿದಿನ ಬೆಳಗ್ಗೆ 6 ರಿಂದ 9 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಈ ಅವಧಿ ಮೀರಿ ಮನೆಯಿಂದ ಹೊರ ಬಂದರೆ ಎರಡು ಸಾವಿರ ರೂ. ದಂಡ ವಿಧಿಸುವ ಎಚ್ಚರಿಕೆ ನೀಡಲಾಗಿದೆ. ಬೆಳಗ್ಗೆ ಒಂಭತ್ತು ಗಂಟೆ ಬಳಿಕವು ಅಂಗಡಿ ತೆಗೆದಿದ್ದರೆ ಮಾಲೀಕರಿಗೆ ಹತ್ತು ಸಾವಿರ ದಂಡ ವಿಧಿಸುವ ಎಚ್ಚರಿಕೆ ನೀಡಲಾಗಿದೆ.
‘ಗ್ರಾಮದಲ್ಲಿ ಬಡವರಿದ್ದಾರೆ. ಅವರಿಗೆ ಸರ್ಕಾರದಿಂದ ರೇಷನ್ ಪೂರೈಕೆ ಮಾಡಲಾಗಿದೆ. ಒಂದು ವೇಳೆ ಇದನ್ನು ಮೀರಿ ಅಗತ್ಯ ವಸ್ತುಗಳ ಬೇಕಿದ್ದರೆ ಊರಿನ ಮುಖಂಡರಿಗೆ ತಿಳಿಸಿದರೆ ದಿನಸಿ ಪೂರೈಕೆಗೆ ವ್ಯವಸ್ಥೆ ಮಾಡುತ್ತೇವೆ’ ಎಂದು ಕುಮಾರ್ ನಾಯ್ಕ ತಿಳಿಸಿದರು.
ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸಾವಿನ ವಿಚಾರದಲ್ಲಿ ಸುಳ್ಳು ಲೆಕ್ಕ, ಶಾಸಕರಿಂದಲೇ ಗಂಭೀರ ಆರೋಪ
ಜನರು ಹೊರಗೆ ಓಡಾಡದಂತೆ ತಡೆಯಲು ಮತ್ತು ಪರ ಊರಿನ ಜನರು ನಾರಾಯಣಪುರದೊಳಗೆ ಬಾರದಂತೆ ನೋಡಿಕೊಳ್ಳಲು ಕೆಲವು ಯುವಕರಿಗೆ ಜವಾಬ್ದಾರಿ ನೀಡಲಾಗಿದೆ.
ಸ್ವಯಂ ಲಾಕ್ ಡೌನ್ ವಿಧಿಸಿಕೊಂಡು ನಾರಾಯಣಪುರ ಗ್ರಾಮದವರು ಇತರರಿಗೆ ಮಾದರಿಯಾಗಿದೆ. ಗ್ರಾಮಗಳ ಹಂತದಲ್ಲಿ ಈ ಮಾದರಿ ಅನುಸರಿಸಿದರೆ ಜಿಲ್ಲೆಯಲ್ಲಿ ಸೋಂಕು ತಡೆಗೆ ಅನುಕೂಲವಾಗಲಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






