ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಕುಂಸಿ, ಆಯನೂರು ಸುತ್ತಮುತ್ತ ಇಂದು ಸಂಜೆ ಗುಡುಗು, ಗಾಳಿ ಸಹಿತ ಭಾರಿ ಮಳೆಯಾಗಿದೆ. ಇದರಿಂದ ವಿವಿಧೆಡೆ ಆಸ್ತಿಪಾಸ್ತಿ ಹಾನಿ ಉಂಟಾಗಿದೆ. ಸಿಡಿಲು ಬಡಿದು ಸುಮಾರು 40 ಕುರಿಗಳು (Sheeps) ಸಾವನ್ನಪ್ಪಿವೆ. ಅಲ್ಲಲ್ಲಿ ರಸ್ತೆಗೆ ಅಡ್ಡಲಾಗಿ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ.
ಆಯನೂರು ಸುತ್ತಮುತ್ತ ಇಂದು ಸಂಜೆ ಸುಮಾರು ಮುಕ್ಕಾಲು ಗಂಟೆಗು ಹೆಚ್ಚು ಹೊತ್ತು ಭಾರಿ ಮಳೆಯಾಗಿದೆ. ಗುಡುಗು, ಗಾಳಿ ಸಾಹಿತ ಜೋರು ಮಳೆ ಸುರಿದಿದೆ.
ಸಿಡಿಲಿಗೆ ಕುರಿಗಳು ಸಾವು
ಆಯನೂರು ಸಮೀಪದ ಬಾಳೆಕೊಪ್ಪ ಗ್ರಾಮದಲ್ಲಿ ಸಿಡಿಲಿಗೆ ಸುಮಾರು 40 ಕುರಿಗಳು ಸಾವನ್ನಪ್ಪಿವೆ. ಇಲ್ಲಿನ ಹುಚ್ಚಪ್ಪ ಎಂಬುವವರಿಗೆ ಸೇರಿದ ಕುರಿಗಳನ್ನು ಗುಡ್ಡದ ಬಯಲಿನಲ್ಲಿ ಮೇಯಿಸುತ್ತಿದ್ದರು. ಈ ಸಂದರ್ಭ ಗುಡುಗು ಸಹಿತ ಮಳೆ ಶುರುವಾಗಿದೆ.

ಇದನ್ನೂ ಓದಿ » ಭದ್ರಾವತಿಯಲ್ಲಿ ಬೆಳ್ಳಂಬೆಳಗ್ಗೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸ್, ಏನಿದು ಕೇಸ್?
ಈ ವೇಳೆ ಸಿಡಿಲು ಬಡಿದು ಕುರಿಗಳು ಮೃತಪಟ್ಟಿವೆ. ಇದರಿಂದ ರೈತ ಹುಚ್ಚಪ್ಪ ಅವರಿಗೆ ಲಕ್ಷಾಂತರ ರೂ. ನಷ್ಟವಾಗಿದೆ. ಕಂದಾಯ ಇಲಾಖೆ ಅಧಿಕಾರಿಗಳು, ವೈದ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಇನ್ನು, ಗಾಳಿ, ಮಳೆಯಿಂದಾಗ ಈ ಭಾಗದಲ್ಲಿ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ.

LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





