SHIVAMOGGA LIVE NEWS | 20 MARCH 2023
SHIMOGA : ಕೇಂದ್ರ ಕಾರಾಗೃಹದ ಮೇಲೆ ಶಿವಮೊಗ್ಗ ಪೊಲೀಸರು ದಿಢೀರ್ ದಾಳಿ (Raid) ನಡೆಸಿ ಪರಿಶೀಲನೆ ನಡೆಸಿದರು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ದಿಢೀರ್ ದಾಳಿ
ಸೋಗಾನೆ ಬಳಿ ಇರುವ ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ಇಂದು ಬೆಳಗ್ಗೆ ದಿಢೀರ್ ದಾಳಿ (Raid) ನಡೆಸಲಾಯಿತು. ಕಾರಾಗೃಹದಲ್ಲಿರುವ ಪ್ರತಿ ಸೆಲ್ ನಲ್ಲಿಯು ಪೊಲೀಸರು ತಪಾಸಣೆ ಮಾಡಿದರು. ಆದರೆ ಜೈಲಿನಲ್ಲಿ ಯಾವುದೆ ಅಕ್ರಮ ವಸ್ತುಗಳು ಸಿಕ್ಕಿಲ್ಲ ಎಂದು ತಿಳಿದು ಬಂದಿದೆ.
ದಾಳಿಗೆ ಕಾರಣವೇನು?
ಇನ್ನು, ದಾಳಿ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಜಿಲ್ಲಾ ಪೊಲೀಸ್ ಇಲಾಖೆ, ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ತಿಳಿಸಲಾಗಿದೆ. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರ ನೇತೃತ್ವದಲ್ಲಿ, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಅವರು ದಾಳಿ ನಡೆಸಿದರು.
ತುಂಗಾ ನಗರ ಇನ್ಸ್ ಪೆಕ್ಟರ್ ಮಂಜುನಾಥ್, ಕೋಟೆ ಠಾಣೆ ಇನ್ಸ್ ಪೆಕ್ಟರ್ ಶಿವಪ್ರಸಾದ್ ರಾವ್, ದೊಡ್ಡಪೇಟೆ ಠಾಣೆ ಇನ್ಸ್ ಪೆಕ್ಟರ್ ಅಂಜನ್ ಕುಮಾರ್, ಶಿವಮೊಗ್ಗ ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್ ಗುರು ಬಸವರಾಜ್, ಮಹಿಳಾ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಕುಮಾರ್, ಜಯನಗರ ಠಾಣೆ ಇನ್ಸ್ ಪೆಕ್ಟರ್ ಗಜೇಂದ್ರಪ್ಪ, ಡಿಎಆರ್ ಪೊಲೀಸ್ ಘಟಕದ ಆರ್.ಪಿ.ಐ ಶಿವಾನಂದ ಗುಣದಾಳ್, 60 ಪೊಲೀಸ್ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಡಿಸಿ ಕಚೇರಿಗೆ ಗೋ ಮೂತ್ರ ಸಿಂಪಡಿಸಿದ ಹಿಂದೂ ಕಾರ್ಯಕರ್ತರು, ಕಾರಣವೇನು?
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



