ಆಯನೂರಿನಲ್ಲಿ ಪತ್ರಿಕೆ ಹಂಚುವ ಹುಡುಗನ ಸಮಯ ಪ್ರಜ್ಞೆಗೆ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಆಯನೂರು: ಪತ್ರಿಕೆ ಹಂಚುವ ಬಾಲಕನ ಸಮಯಪ್ರಜ್ಞೆಯಿಂದಾಗಿ ಆಯನೂರಿನಲ್ಲಿ ದೊಡ್ಡ ದುರಂತ (Short Circuit) ತಪ್ಪಿದೆ. ಕಟ್ಟಡವೊಂದರ ಮೀಟರ್‌ ಬೋರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪತ್ರಿಕೆ ಹಂಚಲು ತೆರಳಿದ್ದ ಬಾಲಕ ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದ. ಕೂಡಲೆ ಬೆಂಕಿ ನಂದಿಸಿದ್ದು ಭಾರಿ ನಷ್ಟ ತಪ್ಪಿದೆ.

ಬಿ.ಹೆಚ್‌.ರಸ್ತೆಯ ಕಟ್ಟಡವೊಂದರ ಮೀಟರ್‌ ಬೋರ್ಡ್‌ನಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ (Short Circuit) ಬೆಂಕಿ ಕಾಣಿಸಿಕೊಂಡಿತ್ತು. ಬೆಳಗ್ಗೆ 6.30ರ ಹೊತ್ತಿಗೆ ಪತ್ರಿಕೆ ಹಾಕಲು ತೆರಳಿದ್ದ ಶ್ರೇಯಸ್‌ ಮಿರಜ್ಕರ್‌ ಎಂಬ ಬಾಲಕ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಕೂಡಲೆ ಬೆಂಕಿ ನಂದಿಸಿದ್ದಾರೆ. ಈ ಕಟ್ಟಡದಲ್ಲಿ ಪೇಯಿಂಟ್‌ ಅಂಗಡಿ, ಹಾರ್ಡ್‌ವೇರ್‌ ಶಾಪ್‌, ಬ್ಯಾಂಕ್‌, ಎಟಿಎಂ ಇದೆ. ಸ್ವಲ್ಪ ತಡವಾಗಿದ್ದರು ಭಾರಿ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಪತ್ರಿಕೆ ಹಂಚುವ ಬಾಲಕನ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ.

Short-Circut-at-Ayanuru-Building-today-morning

ಇದನ್ನೂ ಓದಿ » ಮಳೆಯಾದರು ಶಿವಮೊಗ್ಗದಲ್ಲಿ ತಗ್ಗದ ಧಗೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment