ಆಯನೂರು: ಪತ್ರಿಕೆ ಹಂಚುವ ಬಾಲಕನ ಸಮಯಪ್ರಜ್ಞೆಯಿಂದಾಗಿ ಆಯನೂರಿನಲ್ಲಿ ದೊಡ್ಡ ದುರಂತ (Short Circuit) ತಪ್ಪಿದೆ. ಕಟ್ಟಡವೊಂದರ ಮೀಟರ್ ಬೋರ್ಡ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪತ್ರಿಕೆ ಹಂಚಲು ತೆರಳಿದ್ದ ಬಾಲಕ ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದ. ಕೂಡಲೆ ಬೆಂಕಿ ನಂದಿಸಿದ್ದು ಭಾರಿ ನಷ್ಟ ತಪ್ಪಿದೆ.
ಬಿ.ಹೆಚ್.ರಸ್ತೆಯ ಕಟ್ಟಡವೊಂದರ ಮೀಟರ್ ಬೋರ್ಡ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ (Short Circuit) ಬೆಂಕಿ ಕಾಣಿಸಿಕೊಂಡಿತ್ತು. ಬೆಳಗ್ಗೆ 6.30ರ ಹೊತ್ತಿಗೆ ಪತ್ರಿಕೆ ಹಾಕಲು ತೆರಳಿದ್ದ ಶ್ರೇಯಸ್ ಮಿರಜ್ಕರ್ ಎಂಬ ಬಾಲಕ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಕೂಡಲೆ ಬೆಂಕಿ ನಂದಿಸಿದ್ದಾರೆ. ಈ ಕಟ್ಟಡದಲ್ಲಿ ಪೇಯಿಂಟ್ ಅಂಗಡಿ, ಹಾರ್ಡ್ವೇರ್ ಶಾಪ್, ಬ್ಯಾಂಕ್, ಎಟಿಎಂ ಇದೆ. ಸ್ವಲ್ಪ ತಡವಾಗಿದ್ದರು ಭಾರಿ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಪತ್ರಿಕೆ ಹಂಚುವ ಬಾಲಕನ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ.
ಇದನ್ನೂ ಓದಿ » ಮಳೆಯಾದರು ಶಿವಮೊಗ್ಗದಲ್ಲಿ ತಗ್ಗದ ಧಗೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200