Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಹೊಳೆಹೊನ್ನೂರು ಚಾತುರ್ಮಾಸ್ಯದಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ವಿದ್ವತ್‌ ಸಭೆಯಲ್ಲಿ ಶ್ರೀಗಳ ಸಂದೇಶ

ಹೊಳೆಹೊನ್ನೂರು ಚಾತುರ್ಮಾಸ್ಯದಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ವಿದ್ವತ್‌ ಸಭೆಯಲ್ಲಿ ಶ್ರೀಗಳ ಸಂದೇಶ

14/07/2023 9:13 PM
ನಿತಿನ್‌ ಕೈದೊಟ್ಲು

SHIVAMOGGA LIVE | 15 JULY 2023

HOLEHONNURU : ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿಯವರ 28ನೇ ಚಾತುರ್ಮಾಸ್ಯ (Chaturmasya) ಹೊಳೆಹೊನ್ನೂರಿನಲ್ಲಿ ನಡೆಯುತ್ತಿದೆ. ಟೀ ಇಂಡಿಯಾ ಮಾಜಿ ಆಲ್‌ರೌಂಡರ್‌ ವಿಜಯ ಭಾರದ್ವಾಜ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದೇ ವೇಳೆ, ಚಾತುರ್ಮಾಸ್ಯ ಗೀತೆಗಳನ್ನು ಬಿಡುಗಡೆ ಮಾಡಲಾಯಿತು.

 

ಇವತ್ತಿನ ನ್ಯೂಸ್‌
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ – ಸಿಗಂದೂರು, ಹಸಿರುಮಕ್ಕಿ ಲಾಂಚ್‌ಗಳ ಸೇವೆ ಯಥಾಸ್ಥಿತಿಗೆ, ಸ್ಥಳೀಯರಲ್ಲಿ ನಿಟ್ಟುಸಿರು, ಪ್ರವಾಸಿಗರು ಫುಲ್‌ ಖುಷ್‌

ತಮ್ಮ 28ನೇ ಚಾತುರ್ಮಾಸ್ಯದ (Chaturmasya) ಅಂಗವಾಗಿ ನಡೆದ ವಿದ್ವತ್ ಸಭೆಯಲ್ಲಿ ಶ್ರೀಗಳು ಶ್ರೀ ಸತ್ಯಧರ್ಮರ ಭಾಗವತ ದಶಮ ಸ್ಕಂದ ವ್ಯಾಖ್ಯಾನಾಧಾರಿತ ಸಂದೇಶ ನೀಡಿದರು.

ನಮಗೆ ಭಗವಂತ ಮಾಡಿರುವ ಉಪಕಾರಗಳನ್ನು ಸ್ಮರಿಸಿ ಆತನ ಉಪಾಸನೆ ಮಾಡಬೇಕು. ಅದು ಬಿಟ್ಟು ಕೇವಲ ಉದ್ದೇಶ ಈಡೇರಿಕೆಗಾಗಿ ದೇವರ ಸ್ಮರಣೆ ಸಲ್ಲದು. ತಂದೆಯನ್ನು ಹೊಗಳಿದರೆ ಪಿತೃ ಭಕ್ತನಾದ ಪುತ್ರನಿಗೆ ಹೇಗೆ ಸಂತೋಷವಾಗುತ್ತದೆಯೋ ಹಾಗೆ ಎಲ್ಲರ ತಂದೆ ಎನಿಸಿರುವ ದೇವರ ಕಥೆಯನ್ನು ಕೇಳುವುದರಿಂದ ನಮಗೆ ಆನಂದವಾಗಬೇಕು. ಅದರಲ್ಲೂ ದಶಮ ಸ್ಕಂದದಲ್ಲಿ ಬರುವ ಶ್ರೀಕೃಷ್ಣನ ಕಥೆ ಮೋಕ್ಷ ಸಾಧನ ಎಂದರು.ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ, ಉತ್ತರಾದಿ ಮಠ

ಇದಕ್ಕೂ ಪೂರ್ವ ಮುಕುಂದಾಚಾರ್ಯ ರಾಯಚೂರು ಪ್ರವಚನ ನೀಡಿದರು. ಬೆಂಗಳೂರಿನ ಜಯತೀರ್ಥ ವಿದ್ಯಾಪೀಠದ ಕುಲಪತಿ ಗುತ್ತಲ ರಂಗಾಚಾರ್ಯ, ಉತ್ತರಾದಿ ಮಠದ ದಿವಾನರಾದ ಶಶಿ ಆಚಾರ್ಯ, ಪಂಡಿತರಾದ ನವರತ್ನ ಶ್ರೀನಿವಾಸಾಚಾರ್ಯ, ನವರತ್ನ ಪುರುಷೋತ್ತಮಾಚಾರ್ಯ, ರಘೂತ್ತಮಾಚಾರ್ಯ ಸಂಡೂರು, ರಾಮಧ್ಯಾನಿ ಅನಿಲ್, ಗುರುರಾಜ್ ಮೊದಲಾದವರಿದ್ದರು.

Holehonnur Chaturmasya

ಚಾತುರ್ಮಾಸ್ಯ ಗೀತೆ ಬಿಡುಗಡೆ

ಇದೇ ಸಂರ್ಭದಲ್ಲಿ ಚಾತುರ್ಮಾಸ್ಯ ಗೀತೆಗಳನ್ನು ಬಿಡುಗಡೆ ಮಾಡಲಾಯಿತು. ಶ್ರೀನಿ  ಆಚಾರ್ಯ ಅವರು ರಚಿಸಿರುವ ಮೂಲರಾಮನ ಚಾತುರ್ಮಾಸ್ಯಕ್ಕೆ ಹೊಳೆಹೊನ್ನೂರಿಗೆ ಹೋಗೋಣ ಮತ್ತು ಸುಮಂತ ಮನ್ನಾರಿ ರಚಿಸಿರುವ ಸತ್ಯಾತ್ಮ ತೀರ್ಥರ ದರುಶನ ಮಾಡಿ ಪಾವನರಾಗೋಣ ಎಂಬ ಎರಡು ಹಾಡುಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಈ ಗೀತೆಗಳನ್ನು ಕೆ. ವೇಣುಗೋಪಾಲ್ ಅವರು ಹಾಡಿದ್ದು, ವಾದಿರಾಜ ಕಾಖಂಡಕಿ ರಾಗ ಸಂಯೋಜನೆ ಮಾಡಿದ್ದಾರೆ. ವಿನಯ್ ರಂಗೋಳ್ ಸಂಗೀತ ಪರಿಕಲ್ಪನೆ ಮತ್ತು ಸುಜಯ ಬಾಗೇವಾಡಿ ಸಂಗೀತ ಚಿಂತನೆ ನೀಡಿದ್ದಾರೆ.

Cricketer Vijay Bharadwaj at Holehonnur Chaturmasya

ಮಾಜಿ ಕ್ರಿಕೆಟಿಗನಿಗೆ ಗೌರವ

ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಶುಕ್ರವಾರ ಭಾರತ ಕ್ರಿಕೆಟ್ ತಂಡದ ಮಾಜಿ ಆಲ್‌ರೌಂಡರ್ ವಿಜಯ ಭಾರದ್ವಾಜ್ ಭಾಗವಹಿಸಿದ್ದರು. ಈ ವೇಳೆ ವ್ಯವಸ್ಥಾಪನಾ ಸಮಿತಿಯಿಂದ ಅವರನ್ನು ಗೌರವಿಸಲಾಯಿತು.

Maland Concrete

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article ADIKE-RATE-SHIVAMOGGA-LIVE-NEWS ಅಡಿಕೆ ರೇಟ್‌ | 13 ಜುಲೈ 2023 | ಯಾವ್ಯಾವ ಮಾರುಕಟ್ಟೆಯಲ್ಲಿ ಗುರುವಾರ ಎಷ್ಟಿತ್ತು ಅಡಿಕೆ ಧಾರಣೆ?
Next Article Shivamogga-Bengaluru-Indigo-Airlines-ATR-72-Flight ಶಿವಮೊಗ್ಗ – ಬೆಂಗಳೂರು ವಿಮಾನದ ಟಿಕೆಟ್‌ ಬಕ್ಕಿಂಗ್‌ಗೆ ದಿನಾಂಕ ಫಿಕ್ಸ್‌, ಯಾವ ಮಾದರಿ ವಿಮಾನ? ಎಷ್ಟು ಸೀಟ್‌ ಇರುತ್ತೆ?

ಇದನ್ನೂ ಓದಿ

Tree-falls-to-Shimoga-Thirthahalli-Road-at-gajanuru
SHIVAMOGGA

ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಗೆ ಉರುಳಿದ ಬೃಹತ್ ಆಲದ ಮರ, ವಾಹನ ಸಂಚಾರಕ್ಕೆ ಅಡಚಣೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
KUMSI NEWS 1
SHIVAMOGGA

ಕುಂಸಿ ಮೆಸ್ಕಾಂ ವ್ಯಾಪ್ತಿಯಲ್ಲಿ ಜನ ಸಂಪರ್ಕ ಸಭೆ, ಯಾವಾಗ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
Lokayukta-sudden-visit-to-anganavadis
SHIVAMOGGA

ಶಿವಮೊಗ್ಗದ ಅಂಗನವಾಡಿಗಳಿಗೆ ಲೋಕಾಯುಕ್ತರು ದಿಢೀರ್ ಭೇಟಿ, ಪರಿಶೀಲನೆ ವೇಳೆ ಕಾದಿತ್ತು ಆಘಾತ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
100625 Bus mishap at bedarahosahalli in Shimoga taluk
SHIVAMOGGA

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹೆದ್ದಾರಿಗೆ ಅಡ್ಡಲಾಗಿ KSRTC ಬಸ್‌ ಪಲ್ಟಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
Dr-Amshumanth-visit-near-kachinakatte
SHIVAMOGGA

ಶಿವಮೊಗ್ಗ ವಿಮಾನ ನಿಲ್ದಾಣ, ಎಡದಂಡೆ ನಾಲೆ ನೀರಿನಿಂದ ರೈತರಿಗೆ ಸಂಕಷ್ಟ, ಅಧಿಕಾರಿಗಳು ಭೇಟಿ, ಏನಿದು ಕೇಸ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/06/2025
Crime-News-General-Image
BHADRAVATHISHIVAMOGGA

ಶಿರಾಳಕೊಪ್ಪ ಪೊಲೀಸರ ದಾಳಿ 47 ಜಾನುವಾರುಗಳು ವಶಕ್ಕೆ, ಹೊಳೆಹೊನ್ನೂರಿನಲ್ಲಿ ಗೋಮಾಂಸ ಸಾಗಿಸುವಾಗ ರೇಡ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/06/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?