ಎಲ್ಲರೂ ಮೈಸೂರಿಗೆ ತೆರಳಿದ್ದಾಗ ಎದುರು ಮನೆಯಿಂದ ಬಂತು ಫೋನ್‌, ತಕ್ಷಣ ಮರಳಿದಾಗ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA, 3 SEPTEMBER 2024 : ಕುಟುಂಬದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮೈಸೂರಿಗೆ ತೆರಳಿದ್ದ ವೇಳೆ ಮನೆಯ ಬಾಗಿಲಿನ ಬೀಗ ಮುರಿದು (Theft) ಚಿನ್ನಾಭರಣ, ನಗದು ಕಳ್ಳತನ ಮಾಡಲಾಗಿದೆ. ಹರಕೆರೆ ಗ್ರಾಮದ ವೀರೇಶ್‌ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ.

ವೀರೇಶ್‌ ಅವರ ಕುಟುಂಬದವರು ಆ.31ರಂದು ರಾತ್ರಿ ಮೈಸೂರಿಗೆ ತೆರಳಿದ್ದರು. ಮರುದಿನ ಬೆಳಗ್ಗೆ ಎದುರು ಮನೆಯವರು ಕರೆ ಮಾಡಿ, ಕಳ್ಳತನವಾಗಿರುವ ಕುರಿತು ಮಾಹಿತಿ ನೀಡಿದ್ದರು. ಕೂಡಲೆ ಮೈಸೂರಿನಿಂದ ವೀರೇಶ್‌ ಅವರು ಹಿಂತಿರುಗಿದ್ದರು. ಬಾಗಲಿನ ಬೀಗವನ್ನು ಮೀಟಿ ತೆಗೆದು ಒಳ ಹೋಗಿದ್ದ ಕಳ್ಳರು 3.66 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದರು.

ಏನೆಲ್ಲ ಕಳ್ಳತನವಾಗಿದೆ?

ಒಳ ಮನೆಯಲ್ಲಿದ್ದ ಬೀರುವಿನಲ್ಲಿ ಇಟ್ಟಿದ್ದ ಚಿನ್ನದ ಕಿವಿ ಓಲೆಗಳು, ಮಾಂಗಲ್ಯ ಸರ, ಉಂಗುರಗಳು ಕಳ್ಳತನವಾಗಿದೆ. 85 ಸಾವಿರ ರೂ. ನಗದು ಕೂಡ ಕಳುವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ | ಇವತ್ತು ವಾರ್ಷಿಕ ಮಹಾಸಭೆ – 3 ಫಟಾಫಟ್‌ ನ್ಯೂಸ್‌

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment