ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 2 OCTOBER 2024 : ದಸರಾ ಮಹೋತ್ಸವದಲ್ಲಿ ಈ ಬಾರಿ ಅಂಬಾರಿ ಮೆರವಣಿಗೆಗೆ ಮೂರು ಆನೆಗಳು (Elephants) ಭಾಗವಹಿಸುತ್ತಿವೆ. ಸಾಗರನ ಜೊತೆ ಕುಮ್ಕಿ ಆನೆಗಳಾಗಿ ಎರಡು ಗಂಡಾನೆಗಳು ಭಾಗವಹಿಸುತ್ತಿವೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಎಸ್.ಎನ್.ಚನ್ನಬಸಪ್ಪ, ಅಂಬಾರಿ ಮೆರವಣಿಗೆ ಅತ್ಯಂತ ಆಕರ್ಷಣೀಯ. ಕಳೆದ ಬಾರಿ ದಸರಾ ಸಂದರ್ಭದಲ್ಲೇ ಆನೆ ಮರಿ ಹಾಕಿತ್ತು. ಹಾಗಾಗಿ ಈ ಬಾರಿ ಮೂರು ಗಂಡಾನೆಗಳೇ ಭಾಗವಹಿಸುತ್ತಿವೆ. ಮುಂದಿನ ವರ್ಷ ಹೆಣ್ಣಾನೆಗಳು ಭಾಗವಹಿಸಲಿವೆ ಎಂದರು.
ಸಾಗರ ಆನೆ ಅಂಬಾರಿ ಹೊರಲಿದೆ. ಅದರ ಜೊತೆಗೆ ಬಾಲಣ್ಣ ಮತ್ತು ಬಹದ್ದೂರ್ ಆನೆಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಕಳೆದ ವರ್ಷ ದಸರಾ ಮೆರವಣಿಗೆ ಮುನ್ನಾ ದಿನ ಹೆಣ್ಣಾನೆ ಮರಿ ಹಾಕಿತ್ತು. ಇದರಿಂದ ಅಂಬಾರಿಯನ್ನು ಲಾರಿ ಮೇಲೆ ಮೆರವಣಿಗೆ ಮಾಡಲಾಗಿತ್ತು.

ಸಕ್ರೆಬೈಲಿಗೆ ಎಂಎಲ್ಎ, ಪಾಲಿಕೆ ಅಧಿಕಾರಿಗಳು
ಶಿವಮೊಗ್ಗ ದಸರಾ ಮಹೋತ್ಸವದಲ್ಲಿ ಭಾಗವಹಿಸಲಿರುವ ಆನೆಗಳಿಗೆ ಸಕ್ರೆಬೈಲಿನಲ್ಲಿ ಪೂಜೆ ಸಲ್ಲಿಸಲಾಯಿತು. ಶಾಸಕ ಎಸ್.ಎನ್.ಚನ್ನಬಸಪ್ಪ, ಪಾಲಿಕೆ ಕಮಿಷನರ್ ಕವಿತಾ ಯೋಗಪ್ಪನವರ್ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದರು. ಗುರುವಾರ ಸಕ್ರೆಬೈಲು ಬಿಡಾರದಿಂದ ಆನೆಗಳು ಶಿವಮೊಗ್ಗಕ್ಕೆ ಆಗಮಿಸುವ ಸಾಧ್ಯತೆ ಇದೆ.
ಇದನ್ನೂ ಓದಿ » ಬ್ಯಾಟರಿ ಲೈಟ್ ಬಿಟ್ಟ ವಿಚಾರ, ಕೈ ಕೈ ಮಿಲಾಯಿಸಿದ ಕುಟುಂಬಗಳು
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು















