SHIMOGA NEWS, 2 OCTOBER 2024 : ದಸರಾ ಮಹೋತ್ಸವದಲ್ಲಿ ಈ ಬಾರಿ ಅಂಬಾರಿ ಮೆರವಣಿಗೆಗೆ ಮೂರು ಆನೆಗಳು (Elephants) ಭಾಗವಹಿಸುತ್ತಿವೆ. ಸಾಗರನ ಜೊತೆ ಕುಮ್ಕಿ ಆನೆಗಳಾಗಿ ಎರಡು ಗಂಡಾನೆಗಳು ಭಾಗವಹಿಸುತ್ತಿವೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಎಸ್.ಎನ್.ಚನ್ನಬಸಪ್ಪ, ಅಂಬಾರಿ ಮೆರವಣಿಗೆ ಅತ್ಯಂತ ಆಕರ್ಷಣೀಯ. ಕಳೆದ ಬಾರಿ ದಸರಾ ಸಂದರ್ಭದಲ್ಲೇ ಆನೆ ಮರಿ ಹಾಕಿತ್ತು. ಹಾಗಾಗಿ ಈ ಬಾರಿ ಮೂರು ಗಂಡಾನೆಗಳೇ ಭಾಗವಹಿಸುತ್ತಿವೆ. ಮುಂದಿನ ವರ್ಷ ಹೆಣ್ಣಾನೆಗಳು ಭಾಗವಹಿಸಲಿವೆ ಎಂದರು.
ಸಾಗರ ಆನೆ ಅಂಬಾರಿ ಹೊರಲಿದೆ. ಅದರ ಜೊತೆಗೆ ಬಾಲಣ್ಣ ಮತ್ತು ಬಹದ್ದೂರ್ ಆನೆಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಕಳೆದ ವರ್ಷ ದಸರಾ ಮೆರವಣಿಗೆ ಮುನ್ನಾ ದಿನ ಹೆಣ್ಣಾನೆ ಮರಿ ಹಾಕಿತ್ತು. ಇದರಿಂದ ಅಂಬಾರಿಯನ್ನು ಲಾರಿ ಮೇಲೆ ಮೆರವಣಿಗೆ ಮಾಡಲಾಗಿತ್ತು.
ಸಕ್ರೆಬೈಲಿಗೆ ಎಂಎಲ್ಎ, ಪಾಲಿಕೆ ಅಧಿಕಾರಿಗಳು
ಶಿವಮೊಗ್ಗ ದಸರಾ ಮಹೋತ್ಸವದಲ್ಲಿ ಭಾಗವಹಿಸಲಿರುವ ಆನೆಗಳಿಗೆ ಸಕ್ರೆಬೈಲಿನಲ್ಲಿ ಪೂಜೆ ಸಲ್ಲಿಸಲಾಯಿತು. ಶಾಸಕ ಎಸ್.ಎನ್.ಚನ್ನಬಸಪ್ಪ, ಪಾಲಿಕೆ ಕಮಿಷನರ್ ಕವಿತಾ ಯೋಗಪ್ಪನವರ್ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದರು. ಗುರುವಾರ ಸಕ್ರೆಬೈಲು ಬಿಡಾರದಿಂದ ಆನೆಗಳು ಶಿವಮೊಗ್ಗಕ್ಕೆ ಆಗಮಿಸುವ ಸಾಧ್ಯತೆ ಇದೆ.
ಇದನ್ನೂ ಓದಿ » ಬ್ಯಾಟರಿ ಲೈಟ್ ಬಿಟ್ಟ ವಿಚಾರ, ಕೈ ಕೈ ಮಿಲಾಯಿಸಿದ ಕುಟುಂಬಗಳು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200