SHIVAMOGGA LIVE NEWS | 20 JUNE 2024
NR PURA : ಭದ್ರಾ ಹಿನ್ನೀರಿನಲ್ಲಿ (Backwater) ಮುಳುಗಿ ಶಿವಮೊಗ್ಗದ ಮೂವರು ಯುವಕರು ನಾಪತ್ತೆಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಶಿವಮೊಗ್ಗ ವಿದ್ಯಾನಗರದವರು ಎನ್ನಲಾದ ಆದಿಲ್, ಸಾಜಿದ್, ಅಫ್ದಾ ಖಾನ್ ನಾಪತ್ತೆಯಾದವರು.
ಶಿವಮೊಗ್ಗ ವಿದ್ಯಾನಗರದ ನಾಲ್ವರು ಯುವಕರು ಭದ್ರಾ ಹಿನ್ನೀರಿಗೆ ಬಂದಿದ್ದರು. ಮೂವರು ಯುವಕರು ಉಕ್ಕಡದಲ್ಲಿ (ಮೀನು ಹಿಡಿಯಲು ಬಳಸುವ ಸಣ್ಣ ದೋಣಿ) ಭದ್ರಾ ಹಿನ್ನೀರಿನಲ್ಲಿ ತೆರಳಿದ್ದರು. ಉಕ್ಕಡ ಮಗುಚಿ ಮೂವರು ನೀರುಪಾಲಾಗಿದ್ದಾರೆ. ರಾತ್ರಿವರೆಗೆ ಶೋಧ ಕಾರ್ಯ ನಡೆಸಲಾಯಿತು. ಆದರೆ ಮೂವರು ಪತ್ತೆಯಾಗದ ಹಿನ್ನೆಲೆ ಇವತ್ತು ಬೆಳಗ್ಗೆಯಿಂದ ಪುನಃ ಶೋಧ ಕಾರ್ಯ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ.
ಅಗ್ನಿಶಾಮಕ ಸಿಬ್ಬಂದಿ, ಅರಣ್ಯ ಇಲಾಖೆ, ಪೊಲೀಸ್ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಭದ್ರಾವತಿಯಲ್ಲಿ ಪೊಲೀಸ್ ದಾಳಿ, ಕಾರು ಸಹಿತ ಓರ್ವ ಅರಸ್ಟ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200