ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 2 OCTOBER 2024 : ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಭಾಗವಹಿಸುವ ಆನೆಗಳಿಗೆ ತಾಲೀಮು (Training) ಆರಂಭವಾಗಿದೆ. ಸಕ್ರೆಬೈಲು ಬಿಡಾರದಲ್ಲಿಯೇ ಸಾಗರ, ಬಾಲಣ್ಣ ಮತ್ತು ಬಹದ್ದೂರ್ ಆನೆಗಳು ತಾಲೀಮಿನಲ್ಲಿ ತೊಡಗಿಸಿಕೊಂಡಿದ್ದಾವೆ.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಡಿಸಿಎಫ್ ಪ್ರಸನ್ನ ಪಟಗಾರ್, ಕಳೆದ 15 ದಿನದಿಂದ ಆನೆಗಳಿಗೆ ತಾಲೀಮು ನಡೆಸಲಾಗುತ್ತಿದೆ. ಮಹಾನಗರ ಪಾಲಿಕೆಯವರು ಆನೆಗಳನ್ನು ಶಿವಮೊಗ್ಗಕ್ಕೆ ಕೊಂಡೊಯ್ದ ಬಳಿಕ ನಗರದಲ್ಲಿ ತಾಲೀಮು ನಡೆಸಲಾಗುತ್ತದೆ. ಅ.3 ಅಥವಾ 4ರಂದು ಆನೆಗಳು ಶಿವಮೊಗ್ಗಕ್ಕೆ ತೆರಳುವ ಸಾಧ್ಯತೆ ಇದೆ ಎಂದರು.
ಅಂಬಾರಿಯ ಭಾರಕ್ಕೆ ತಕ್ಕಷ್ಟು ಭಾರವನ್ನೇ ಆನೆಯ ಮೇಲೆ ಹೊರಿಸಿ ತಾಲೀಮು ನಡೆಸಲಾಗುತ್ತದೆ. ಸದ್ಯ ಈ ಆನೆಗಳಿಗೆ ಕ್ಯಾಂಪ್ನಲ್ಲಿ ನಿತ್ಯ ನೀಡುವ ಆಹಾರವನ್ನೇ ನೀಡಲಾಗುತ್ತಿದೆ. ಬಳಿಕ ಎಂದಿನಂತೆ ಕಾಡಿಗೆ ಬಿಡಲಾಗುತ್ತದೆ. ಶಿವಮೊಗ್ಗಕ್ಕೆ ತೆರಳಿದ ನಂತರ ಪಾಲಿಕೆ ವತಿಯಿಂದ ಆಹಾರ ಪೂರೈಕೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಸಕ್ರೆಬೈಲು ಕ್ಯಾಂಪ್ನಲ್ಲಿ ನಾಲ್ಕು ಹೆಣ್ಣಾನೆಗಳಿವೆ. ಈ ಪೈಕಿ ಮೂರು ಹೆಣ್ಣಾನೆಗಳು ಮರಿ ಹಾಕಿವೆ. ಮತ್ತೊಂದು ಆನೆ ಗರ್ಭ ಧರಿಸಿದೆ. ಹಾಗಾಗಿ ಈ ಬಾರಿ ಮೆರವಣಿಗೆಗೆ ಹೆಣ್ಣಾನೆಗಳು ಲಭ್ಯವಿರುವುದಿಲ್ಲ ಎಂದು ತಿಳಿಸಿದರು.
ಇದನ್ನೂ ಓದಿ » ಹಾಲು ಉತ್ಪಾದಕರಿಗೆ ಶಾಕ್ ನೀಡಿದ ಶಿಮುಲ್, ಖರೀದಿ ದರ ಕಡಿತ
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು















