ಶಿವಮೊಗ್ಗ: ಜೋರು ಗಾಳಿಗೆ ಸಹಿತ ಮಳೆಯಿಂದಾಗಿ ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಬೃಹತ್ ಮರ (Tree) ಧರೆಗುರುಳಿದೆ. ಶಿವಮೊಗ್ಗ ತಾಲೂಕು ಗಾಜನೂರು ಚೆಕ್ ಪೋಸ್ಟ್ ಸಮೀಪ ಮರ ಬುಡಮೇಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಚೆಕ್ ಪೋಸ್ಟ್ನ ಸಹಿನದಲ್ಲಿದ್ದ ಬೃಹತ್ ಆಲದ ಮರ ಮಧ್ಯಾಹ್ನ ಬೀಸಿದ ಜೋರಿ ಗಾಳಿಗೆ ಧರೆಗುರುಳಿಸಿದೆ. ಇದರಿಂದ ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ. ಮರ ಉರುಳುವಾಗ ಅದೃಷ್ಟವಶಾತ್ ಆ ಭಾಗದಲ್ಲಿ ಯಾವುದೇ ವಾಹನ ಸಂಚರಿಸುತ್ತಿರಲಿಲ್ಲ. ಇದರಿಂದ ದೊಡ್ಡ ಅನಾಹುತ ತಪ್ಪಿದೆ.

ಈಗ ಹೆದ್ದಾರಿ ಪಕ್ಕದಲ್ಲಿರುವ ಕಿರಿದಾದ ದಾರಿಯ ಮೂಲಕ ವಾಹನಗಳು ಸಂಚರಿಸುತ್ತಿವೆ. ಸದ್ಯ ಆಲದ ಮರ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಇನ್ನು, ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಜೋರು ಮಳೆಯಾಗುತ್ತಿದೆ. ಹಲವು ಕಡೆ ಗಾಳಿ ಸಹಿತ ಮಳೆಯಾಗುತ್ತಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಯುವತಿಯ ಮೊಬೈಲ್ ಕದ್ದ ಮಂಗ, ಒಂದು ಗಂಟೆ ಮರವೇರಿ ಕುಳಿತು ಪ್ರಹಸನ
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಗಾಳಿ ಸಹಿತ ಜೋರು ಮಳೆ

LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು






