SHIVAMOGGA LIVE NEWS | 14 JUNE 2024
HOLEHONNURU : ಸಮೀಪದ ಕೂಡ್ಲಿ ಕ್ರಾಸ್ ಬಳಿ ದನದ ಮಾಂಸದ ತ್ಯಾಜ್ಯ ತುಂಬಿದ ಕ್ಯಾಂಟರ್ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿತ್ರದುರ್ಗ – ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ (Highway) ವಾಸನೆ ಬರುತ್ತಿರುವುದರಿಂದ ಅನುಮಾನಗೊಂಡು ಬೈಕ್ ಸವಾರರು ಲಾರಿಯನ್ನು ತಡೆದು ಪರಿಶೀಲಿಸಿದಾಗ ದನದ ಮಾಂಸದ ತ್ಯಾಜ್ಯ ಇರುವುದು ಗೊತ್ತಾಗಿದೆ.
ಕ್ಯಾಂಟರ್ ಬೆನ್ನಟ್ಟಿದ ಯುವಕರು
ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಕ್ಯಾಂಟರ್ ಲೋಡ್ನಿಂದ ಕೆಟ್ಟ ವಾಸನೆ ಬರುವುದನ್ನು ಗಮನಿಸಿದ ಯುವಕರಿಬ್ಬರು ಕ್ಯಾಂಟರ್ ಅನ್ನು ಬೆನ್ನಟಿ ಹಿಡಿಯಲು ಮುಂದಾದಾಗ ಬೈಕ್ ಸವಾರರ ಮೇಲೆ ಕ್ಯಾಂಟರ್ ಹತ್ತಿಸುವ ಪ್ರಯತ್ನ ನಡೆಯಿತು. ಇದರಿಂದ ಕೋಪಗೊಂಡ ಯುವಕರು ವಾಹನವನ್ನು ತಡೆದು ನಿಲ್ಲಿಸಿದರು. ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸ್ ಸಿಬ್ಬಂದಿ ವಾಹನವನ್ನು ವಶಕ್ಕೆ ಪಡೆದುಕೊಂಡರು ಎಂದು ತಿಳಿದು ಬಂದಿದೆ.
ಕೂಡ್ಲಿ ಕ್ರಾಸ್ನಲ್ಲಿ ಜನ ಜಂಗುಳಿ
ದನದ ಮಾಂಸ ತ್ಯಾಜ್ಯ ಸಾಗಣೆ ಸುದ್ದಿ ಹರಡಿ ಕೂಡ್ಲಿ ಕ್ರಾಸ್ನಲ್ಲಿ ಜನ ಜಂಗುಳಿ ಉಂಟಾಗಿತ್ತು. ವಾಹನಗಳನ್ನು ನಿಯಂತ್ರಿಸುವಲ್ಲಿ ಪೊಲೀಸರು ಹೈರಾಣಾದರು. ಪಕ್ಕದ ಚನ್ನಗಿರಿಯ ಕಸಾಯಿ ಖಾನೆಗಳಿಂದ ದನದ ಮಾಂಸದ ಕೊಂಬು ಮೂಳೆಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಮಂಗಳೂರಿನ ಸಂಸ್ಕರಣಾ ಘಟಕಕ್ಕೆ ಸಾಗಿಸಲಾಗುತ್ತಿತ್ತು. ಕ್ಯಾಂಟರ್ ಚಾಲಕ ಕಂಪನಿಗೆ ಸಂಬಂಧಿಸಿದ ಜಿಎಸ್ಟಿ ಬಿಲ್ಗಳನ್ನು ಪೊಲೀಸರಿಗೆ ನೀಡಿದ್ದು ತಪಾಸಣೆ ನಡೆಸಿದ್ದಾರೆ. ದನದ ಮೂಳೆಗಳನ್ನು ಪುಡಿ ಮಾಡಿ ರಾಸಾಯನಿಕಗಳಿಗೆ ಬಳಸುವ ಉದ್ದೇಶದಿಂದ ಸಂಗ್ರಹಿಸಲಾಗಿದೆ ಎನ್ನಲಾಗಿದೆ.
ವಾಹನವನ್ನು ವಶಕ್ಕೆ ಪಡೆದ ಪೊಲೀಸರು ಲಾರಿಯಿಂದ ಕೆಟ್ಟ ವಾಸನೆ ಬರುತ್ತಿರುವ ಕಾರಣ ಪಟ್ಟಣದ ಹೊರವಲಯದ ಭದ್ರಾ ನದಿಯ ಬಳಿ ನಿಲ್ಲಿಸಿದ್ದಾರೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಯಡಿಯೂರಪ್ಪ ವಿರುದ್ಧ ವಾರೆಂಟ್, ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರ ಮೊದಲ ರಿಯಾಕ್ಷನ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200