ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲೆಯ ಸೋಗಾನೆ ಗ್ರಾಮದಲ್ಲಿ ರೈತರೊಬ್ಬರು ಬೆಳೆದಿದ್ದ ಬೆಳೆಗಳಿಗೆ (Crops) ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.
ರಾತ್ರಿ ಯಾರೋ ಕಿಡಿಗೇಡಿಗಳು ಈ ಬಣವೆಗಳಿಗೆ ಬೆಂಕಿ ಹಚ್ಚಿದ್ದಾರೆ. ಇದರಿಂದಾಗಿ ಸುಮಾರು ₹50,000 ಮೌಲ್ಯದ ಬೆಳೆಗಳು ಸಂಪೂರ್ಣ ಭಸ್ಮವಾಗಿವೆ. ಈ ಹಿಂದೆ ಇದೇ ಜಮೀನಿನಲ್ಲಿ ರೈತರು ಬೆಳೆಸಿದ್ದ ತೆಂಗಿನ ಗಿಡಗಳನ್ನು ಸಹ ಕಿಡಿಗೇಡಿಗಳು ಕಿತ್ತು ಹಾಕಿ ತೊಂದರೆ ನೀಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂತೆಕಡೂರು ನಿವಾಸಿ ಹಾಲೇಶ್ ನಾಯ್ಕ್ ಎಂಬುವರು ಸೋಗಾನೆ ಗ್ರಾಮದಲ್ಲಿ ಎರಡು ಎಕರೆ ಬಗರ್ ಹುಕುಂ ಜಮೀನಿನಲ್ಲಿ ತಮ್ಮ ಪತ್ನಿ ಲೋಕಿ ಬಾಯಿ ಅವರೊಂದಿಗೆ ದಶಕಗಳಿಂದ ಕೃಷಿ ಮಾಡಿಕೊಂಡಿದ್ದಾರೆ. ಅವರು ಹುರುಳಿ ಮತ್ತು ತೊಗರಿ ಬೆಳೆಗಳನ್ನು ಬೆಳೆದಿದ್ದು, ಕಟಾವು ಮಾಡಿ, ಜಮೀನಿನಲ್ಲಿರುವ ಶೆಡ್ ಪಕ್ಕದಲ್ಲಿ ಬಣವೆ ಹಾಕಿದ್ದರು.
ಇದನ್ನೂ ಓದಿ – ಕಾರು, ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಗೆ ನೆರವಾದ ಶಿವಮೊಗ್ಗ ಜಿಲ್ಲಾಧಿಕಾರಿ, ಆಗಿದ್ದೇನು?


LATEST NEWS
- ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್, ಏನೇನೆಲ್ಲ ಸ್ಟಾಲ್ಗಳಿವೆ?

- ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? – ಇಂದಿನ ಅಡಿಕೆ ಧಾರಣೆ

- ಹೊಟೇಲ್ ಮಾಲೀಕನಿಂದ ಕೊಲೆ, ಕಾರಿನಲ್ಲಿ ಮೃತದೇಹ ಸಾಗಿಸುವಾಗ ಪೊಲೀಸ್ ಬಲೆಗೆ

- Acting Registrar Appointed for Kuvempu University

About The Editor
ನಿತಿನ್ ಆರ್.ಕೈದೊಟ್ಲು















