NEWS HIGHLIGHTS
ಶಿವಮೊಗ್ಗ: ಗಾಜನೂರು ತುಂಗಾ ಜಲಾಶಯದಿಂದ ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ಹಾಗೂ ಉಪ ಕಾಲುವೆಗಳಿಗೆ 2026-27ನೇ ಸಾಲಿನ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗಾಗಿ ಜುಲೈ 2ರಿಂದಲೇ ನೀರು ಹರಿಸಲು ಕರ್ನಾಟಕ ನೀರಾವರಿ ನಿಗಮ ಆದೇಶಿಸಿದೆ.
ಜಲಾಶಯದಿಂದ ಹರಿಸಲಾಗುತ್ತಿರುವ ಈ ನೀರು ಶಿವಮೊಗ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶಗಳ ಕೃಷಿ ಭೂಮಿಗೆ ಲಭ್ಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಾಲೆಗಳಿಗೆ ನೀರು ಹರಿಸುತ್ತಿರುವುದರಿಂದ ಅಚ್ಚುಕಟ್ಟು ಪ್ರದೇಶದ ರೈತರು ಹಾಗೂ ಸಾರ್ವಜನಿಕರು ತಮ್ಮ ಜಾನುವಾರುಗಳೊಂದಿಗೆ ಮುಖ್ಯ ಮತ್ತು ಉಪನಾಲೆಗಳ ಆವರಣದಲ್ಲಿ ಯಾವುದೇ ಚಟುವಟಿಕೆ ಕೈಗೊಳ್ಳಬಾರದು. ನಾಲೆಯ ಆಸುಪಾಸಿನಲ್ಲಿ ವಾಸಿಸುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕರ್ನಾಟಕ ನೀರಾವರಿ ನಿಗಮದ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ:➤ ರೈತನ ಮನೆ ಮುಂಭಾಗ ಇದ್ದ ರೋಟೋವೇಟರ್ ನಾಪತ್ತೆ