ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | BHADRA DAM | 06 ಮೇ 2022
ಗದಗ, ಬೆಟಗೇರಿ ಭಾಗದ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ (DAM) ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ.6ರ ರಾತ್ರಿ 10.30ರಿಂದ ಮೇ 11ರವರೆಗೆ ಒಟ್ಟು 2.25 ಟಿಎಂಸಿ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತದೆ. ಮೇ 6ರಂದು 3800 ಕ್ಯೂಸೆಕ್, ಮೇ 7ರಂದು 4,340 ಕ್ಯೂಸೆಕ್, ಮೇ 8ರಿಂದ 10ರವರೆಗೆ ತಲಾ 4,520 ಕ್ಯೂಸೆಕ್ ಹಾಗೂ ಮೇ 11ರಂದು 4,340 ಕ್ಯೂಸೆಕ್ ನೀರನ್ನು ಹರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಭದ್ರಾ ಜಲಾಶಯದಿಂದ ನೀರು ಬಿಡುಗಡೆ ಹಿನ್ನೆಲೆ ನದಿ ಪಾತ್ರದ ಜನರು ಎಚ್ಚರ ವಹಿಸುವಂತೆ ಸೂಚಿಸಲಾಗಿದೆ. ನದಿ ತಟದಲ್ಲಿ ಯಾವುದೆ ಚಟುವಟಿಕೆ ನಡೆಸಬಾರದು. ಜಾನುವಾರುಗಳನ್ನು ನದಿ ಬಳಿ ಮೇಯಲು ಬಿಡಬಾರದು. ಇನ್ನು, ನೀರು ಬಿಡುವ ಸಂದರ್ಭ ನದಿಯನ್ನು ನೀರನ್ನು ಮೇಲೆತ್ತಲು ಪಂಪ್ ಸೆಟ್ ಬಳಕೆ ನಿಷೇಧಿಸಲಾಗಿದೆ ಎಂದು ಎಚ್ಚರಿಸಿದ್ದಾರೆ.
ಇದನ್ನೂ ಓದಿ – ಭದ್ರಾ ನಾಲೆಯಲ್ಲಿ ನೀರು ನಿಲ್ಲಿಸುವ ಕುರಿತು ಕಾಡಾ ಸಭೆಯಲ್ಲಿ ಮಹತ್ವದ ನಿರ್ಧಾರ
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






