ಶಿವಮೊಗ್ಗದಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ, ತೋಟ, ಗದ್ದೆಯಲ್ಲಿ ಉಪಟಳ

SHIMOGA NEWS, 20 NOVEMBER 2024 : ಶಿವಮೊಗ್ಗ ತಾಲೂಕಿನ ವಿವಿಧೆಡೆ ಪುನಃ ಕಾಡಾನೆಗಳು (Wild Elephant) ಪ್ರತ್ಯಕ್ಷವಾಗಿವೆ. ತೋಟ, ಗದ್ದೆಗೆ ನುಗ್ಗಿ ಬೆಳೆ ಹಾನಿ ಉಂಟು ಮಾಡಿವೆ.

ಶೆಟ್ಟಿಹಳ್ಳಿ ಅಭ್ಯಯಾರಣ್ಯ ವ್ಯಾಪ್ತಿಯಲ್ಲಿ ಶಿವಮೊಗ್ಗ ತಾಲೂಕಿನ ಹಲವು ಗ್ರಾಮದಲ್ಲಿ ನಿನ್ನೆ ರಾತ್ರಿ ಕಾಡಾನೆಗಳು ದಾಳಿ ಮಾಡಿದ್ದು, ಬೆಳೆ ನಾಶ ಮಾಡಿವೆ. ತಾಲೂಕಿನ ಆಡಿನಕೊಟ್ಟಿಗೆ, ಕೂಡಿ, ತಮ್ಮಡಿಹಳ್ಳಿ ಹಾಗೂ ಚೌಡಿಕಟ್ಟೆ ಭಾಗದಲ್ಲಿ ಕಾಡಾನೆಗಳು ದಾಳಿ ಮಾಡಿದ್ದು, ಅಡಿಕೆ ಗಿಡಗಳನ್ನು ಮುರಿದು, ಕಿತ್ತು ಬಿಸಾಡಿವೆ.

ಆಡಿನಕೊಟ್ಟಿಗೆಯ ಗಿರೀಶ್, ಹೊನ್ನಪ್ಪ, ಸಂತೋಷ್ ಎಂಬುವರ ಜಮೀನಿನಲ್ಲಿ ಆನೆಗಳು ದಾಳಿ ಮಾಡಿದ್ದು, ಬೆಳೆಯನ್ನು ಹಾಳು ಮಾಡಿವೆ.

Wild-Elephant-at-veeragarana-byranakoppa

ಕ್ಯಾಮರಾದಲ್ಲಿ ಸೆರೆ ಸಿಕ್ಕ ಕಾಡಾನೆ

ಆನೆಗಳು ಗುಂಪು ಜೋಳ ಹಾಗೂ ಭತ್ತದ ಗದ್ದೆಯಲ್ಲಿ ಹಗಲು ವೇಳೆ ಓಡಾಡುವುದನ್ನು ರೈತರು ವಿಡಿಯೋ ಮಾಡಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದ ಟಾಪ್‌ 10 ಸುದ್ದಿ | 21 ನವೆಂಬರ್‌ 2024 – ಓದಲು ಇಲ್ಲಿ ಕ್ಲಿಕ್‌ ಮಾಡಿ

ಇನ್ನು ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಬಗ್ಗೆ ರೈತರು, ಅರಣ್ಯ ಇಲಾಖೆಗೆ ದೂರು ಸಲ್ಲಿಸುತ್ತಿದ್ದರೂ, ಇಲಾಖೆಯು ನಿರ್ಲಕ್ಷ್ಯ ವಹಿಸುತ್ತಿದೆ ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ. ತಾಲೂಕಿನ ವೀರಗಾರನ ಬೈರನಕೊಪ್ಪ ಬಳಿ ವಿದ್ಯುತ್ ಸ್ಪರ್ಶಿಸಿ, ಆನೆ ಮೃತಪಟ್ಟ ಬಳಿಕ ಕಾಡಾನೆ ಹಾವಳಿ ಕೊಂಚ ಕಡಿಮೆಯಾಯ್ತು ಎನ್ನುವ ಹೊತ್ತಿನಲ್ಲೇ ಕಾಡಾನೆ ಉಪಟಳ ಮತ್ತೆ ಪ್ರಾರಂಭವಾಗಿದೆ.

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : November 21, 2024 at 12:29 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ನವೆಂಬರ್ 21, 2024

Leave a Comment