ಶಿವಮೊಗ್ಗ ಲೈವ್.ಕಾಂ | AYANUR NEWS | 29 ಜೂನ್ 2020
ಸ್ನೇಹಿತರೊಂದಿಗೆ ಗೌಡನಕೆರೆಯಲ್ಲಿ ಈಜಲು ತೆರಳಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದಾರೆ. ಕೆರೆಯಲ್ಲಿ ಮುಳುಗಿರುವ ಸಾದ್ಯತೆ ಇರುವುದರಿಂದ ಶೋಧ ಕಾರ್ಯ ನಡೆಸಲಾಯಿತು.
ಶಿವಮೊಗ್ಗದ ವೆಂಕಟೇಶನಗರದ ನಿವಾಸಿ ಸಂತೊಷ್ (38) ನಾಪತ್ತೆಯಾದವರು. ಸ್ನೇಹಿತರಾದ ಅಖಿಲೇಶ್, ವಿನಾಯಕ ಮತ್ತು ನವೀನ್ ಅವರ ಜೊತೆಗೆ ಸಂತೋಷ್ ಗೌಡನಕೆರೆಯಲ್ಲಿ ಈಜಲು ತೆರಳಿದ್ದರು.
ಹಣಗೆರೆಕಟ್ಟೆಗೆ ಹೋಗಿ ಬರುತ್ತಿದ್ದರು
ಎಲ್ಲರು ಆಟೋದಲ್ಲಿ ಹಣಗೆರೆಕಟ್ಟೆಗೆ ತೆರಳಿದ್ದರು. ಅಲ್ಲಿಂದ ಹಿಂತಿರುಗುವ ವೇಳೆ ಗೌಡನಕೆರೆಯಲ್ಲಿ ಈಜಲು ಹೋಗಿದ್ದರು. ಈ ವೇಳೆ ಆಳವಾದ ಜಾಗದಲ್ಲಿ ಈಜುವಾಗ ಸಂತೋಷ್ ಕಣ್ಮರೆಯಾಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕತ್ತಲಾಗುವವರೆಗೂ ಶೋಧ ಕಾರ್ಯ
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಭಾನುವಾರ ಸಂಜೆವರೆಗೆ ಶೋಧ ಕಾರ್ಯ ನಡೆಸಿದರು. ಕತ್ತಲಾದ ಹಿನ್ನೆಲೆ ಶೋಧ ಕಾರ್ಯ ಸ್ಥಗಿತಗೊಳಿಸಲಾಯಿತು. ಎರಡು ಬೋಟ್ ಬಳಸಿ ಸಂತೋಷ್ ಮುಳುಗಿರುಬಹುದಾದ ಸ್ಥಳದಲ್ಲೆಲ್ಲ ಹುಡುಕಟ ಮಾಡಲಾಯಿತು. ಆದರೆ ಸಂತೋಷ್ ಪತ್ತೆಯಾಗಿಲ್ಲ.
ಸಂತೋಷ್ ಶಿವಮೊಗ್ಗದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರು ಎಂದು ತಿಳಿದು ಬಂದಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200