ಟ್ರಾಕ್ಟರ್‌ ಚಾಲಕನ ಒಂದು ತಪ್ಪು ನಿರ್ಧಾರಕ್ಕೆ 19 ವರ್ಷದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಸಾಗರ ರಸ್ತೆಯಲ್ಲಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ (bike) ಡಿಕ್ಕಿ ಹೊಡೆದು 19 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮುದ್ದಿನಕೊಪ್ಪ ಟ್ರೀ ಪಾರ್ಕ್ ಬಳಿ ಘಟನೆ ನಡೆದಿದೆ.

ಚಾಮುಂಡಿಪುರ ಗ್ರಾಮದ ಶರವಣ (19) ಯಮಹಾ ಬೈಕ್‌ನಲ್ಲಿ ಶಿವಮೊಗ್ಗದಿಂದ ಆಯನೂರು ಮಾರ್ಗವಾಗಿ ತೆರಳುತ್ತಿದ್ದರು. ಮುದ್ದಿನಕೊಪ್ಪ ಬಳಿ ಸೂಚನಾ ಫಲಕ ಅಥವಾ ರಿಫ್ಲೆಕ್ಟರ್ ಸ್ಟಿಕ್ಕರ್ ಇಲ್ಲದೆ ರಸ್ತೆಗೆ ಟ್ರಾಕ್ಟರ್‌ ನಿಲ್ಲಿಸಲಾಗಿತ್ತು. ಟ್ರಾಲಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದಿದ್ದು, ಶರವಣನ ಮುಖ ಮತ್ತು ಎದೆಗೆ ಗಂಭೀರ ಪೆಟ್ಟು ಬಿದ್ದಿದೆ. ತೀವ್ರ ರಕ್ತಸ್ರಾವದಿಂದಾಗಿ ಮೃತಪಟ್ಟಿದ್ದಾರೆ.

Tyavarekoppa-Shimoga-Sagara-Road

ಟ್ರಾಕ್ಟರ್ ಚಾಲಕನ ಬೇಜವಾಬ್ದಾರಿತನವೇ ಘಟನೆಗೆ ಕಾರಣ ಎಂದು ಶರವಣ ಅವರ ಪೋಷಕರು ದೂರಿನಲ್ಲಿ ಆರೋಪಿಸಿದ್ದಾರೆ. ಘಟನೆ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದ ಲಾಡ್ಜ್‌ನಲ್ಲಿ ಮಹಿಳಾ ಸಿಬ್ಬಂದಿಯನ್ನು ಎಳೆದಾಡಿದ ಬೆಂಗಳೂರು ವ್ಯಕ್ತಿ, ಇತರೆ ಸಿಬ್ಬಂದಿ ಮೇಲೆ ಹಲ್ಲೆ

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment