ಟ್ರಾಕ್ಟರ್‌ ಚಾಲಕನ ಒಂದು ತಪ್ಪು ನಿರ್ಧಾರಕ್ಕೆ 19 ವರ್ಷದ ಯುವಕ ಸಾವು, ಆಗಿದ್ದೇನು?

Published On : ಫೆಬ್ರವರಿ 11, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ಸಾಗರ ರಸ್ತೆಯಲ್ಲಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ (bike) ಡಿಕ್ಕಿ ಹೊಡೆದು 19 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮುದ್ದಿನಕೊಪ್ಪ ಟ್ರೀ ಪಾರ್ಕ್ ಬಳಿ ಘಟನೆ ನಡೆದಿದೆ.

ಚಾಮುಂಡಿಪುರ ಗ್ರಾಮದ ಶರವಣ (19) ಯಮಹಾ ಬೈಕ್‌ನಲ್ಲಿ ಶಿವಮೊಗ್ಗದಿಂದ ಆಯನೂರು ಮಾರ್ಗವಾಗಿ ತೆರಳುತ್ತಿದ್ದರು. ಮುದ್ದಿನಕೊಪ್ಪ ಬಳಿ ಸೂಚನಾ ಫಲಕ ಅಥವಾ ರಿಫ್ಲೆಕ್ಟರ್ ಸ್ಟಿಕ್ಕರ್ ಇಲ್ಲದೆ ರಸ್ತೆಗೆ ಟ್ರಾಕ್ಟರ್‌ ನಿಲ್ಲಿಸಲಾಗಿತ್ತು. ಟ್ರಾಲಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದಿದ್ದು, ಶರವಣನ ಮುಖ ಮತ್ತು ಎದೆಗೆ ಗಂಭೀರ ಪೆಟ್ಟು ಬಿದ್ದಿದೆ. ತೀವ್ರ ರಕ್ತಸ್ರಾವದಿಂದಾಗಿ ಮೃತಪಟ್ಟಿದ್ದಾರೆ.

Tyavarekoppa-Shimoga-Sagara-Road

ಟ್ರಾಕ್ಟರ್ ಚಾಲಕನ ಬೇಜವಾಬ್ದಾರಿತನವೇ ಘಟನೆಗೆ ಕಾರಣ ಎಂದು ಶರವಣ ಅವರ ಪೋಷಕರು ದೂರಿನಲ್ಲಿ ಆರೋಪಿಸಿದ್ದಾರೆ. ಘಟನೆ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದ ಲಾಡ್ಜ್‌ನಲ್ಲಿ ಮಹಿಳಾ ಸಿಬ್ಬಂದಿಯನ್ನು ಎಳೆದಾಡಿದ ಬೆಂಗಳೂರು ವ್ಯಕ್ತಿ, ಇತರೆ ಸಿಬ್ಬಂದಿ ಮೇಲೆ ಹಲ್ಲೆ

ನಮ್ಮ ಸೋಶಿಯಲ್ ಮೀಡಿಯಾ ಗ್ರೂಪ್ ಸೇರಿ

JNN College of Engineering Admissions started

© ಶಿವಮೊಗ್ಗ ಲೈವ್‌ : ಫೆಬ್ರವರಿ 11, 2026

Leave a Comment