SHIVAMOGGA LIVE NEWS | 17 MAY 2023
SORABA : ವಿಷದ ಹುಲ್ಲು ಸೇವಿಸಿ 8 ಜಾನುವಾರುಗಳು (Cows) ಸಾವನ್ನಪ್ಪಿವೆ. ಸೊರಬ ತಾಲೂಕು ಕೆರೆಕೊಪ್ಪ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ದ್ಯಾವರಾಯಪ್ಪ ಮತ್ತು ರಾಮಣ್ಣ ಎಂಬುವವರಿಗೆ ಸೇರಿದ ತಲಾ ನಾಲ್ಕು ಜಾನುವಾರುಗಳು ಸಾವನ್ನಪ್ಪಿವೆ.
ಜಮೀನಿನಲ್ಲಿ ಮೆಕ್ಕೆಜೋಳ ಕಟಾವು ಮಾಡಿದ್ದು, ಅದರಲ್ಲಿ ಬೆಳೆದ ಮರುಕೊಳೆ ಹುಲ್ಲು ಸೇವಿಸಿದ 10 ಜಾನುವಾರುಗಳು ಅಸ್ವಸ್ಥಗೊಂಡಿದ್ದವು. ಪಶು ವೈದ್ಯರು ಚಿಕಿತ್ಸೆ ನೀಡಿದ್ದರಿಂದ ಎರಡು ಜಾನುವಾರುಗಳು ಬದುಕುಳಿದಿವೆ.
![]() |
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಜಾನುವಾರುಗಳ (Cows) ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಅವುಗಳ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ನಿಖರ ಕಾರಣ ಗೊತ್ತಾಗಲಿದೆ. ಸ್ಥಳಕ್ಕೆ ಸಹಾಯಕ ಪಶುವೈದ್ಯ ಡಾ. ಪ್ರದೀಪ್ ಭೇಟಿ ನೀಡಿದ್ದರು.
ಇದನ್ನೂ ಓದಿ – ಮರಕ್ಕೆ ಕಾರು ಡಿಕ್ಕಿಯಾಗಿ ಕಾಂಗ್ರೆಸ್ ಮುಖಂಡ ಸಾವು, ಇನ್ನಿಬ್ಬರಿಗೆ ಗಾಯ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200