ಸೊರಬ: ಮದ್ಯ ಸೇವಿಸುತ್ತಿದ್ದ ವೇಳೆ ಮಾವ–ಅಳಿಯನ ನಡುವೆ ಉಂಟಾದ ಜಗಳ (Altercation) ಅಳಿಯನ ಕೊಲೆಯಲ್ಲಿ ಅಂತ್ಯವಾಗಿದೆ. ಆನವಟ್ಟಿ ಜಡೆ ಗ್ರಾಮದಲ್ಲಿ ಗುರುವಾರ ರಾತ್ರಿ ಘಟನೆ ಸಂಭವಿಸಿದೆ.
ಗ್ರಾಮದ ಪ್ರಿಯದರ್ಶಿನಿ ಹೋಟೆಲ್ನಲ್ಲಿ ಕಮರೂರು ಗೋಮಾಳ ಪ್ರದೇಶದ ನಿವಾಸಿ ರವೀಂದ್ರ ಹಾಗೂ ಆತನ ಮಾವ ಉಮೇಶ್ ಮದ್ಯಪಾನ ಮಾಡಿದ್ದಾರೆ. ಈ ವೇಳೆ ನಡೆದ ಮಾತುಕತೆ ಜಗಳಕ್ಕೆ ತಿರುಗಿದೆ. ಆಗ ಉಮೇಶ್ ಹೋಟೆಲ್ನಲ್ಲಿದ್ದ ಪೇಪರ್ ಕತ್ತರಿಸುವ ಕತ್ತರಿಯಿಂದ ರವೀಂದ್ರನ (34) ಎದೆಗೆ ಇರಿದಿದ್ದಾನೆ.

ತೀವ್ರ ಗಾಯಗೊಂಡಿದ್ದ ರವೀಂದ್ರನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ. ಈ ಸಂಬಂಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದ ಹವಾಮಾನ ವರದಿ | 7 ಜೂನ್ 2025 | ಜಿಲ್ಲೆಯಲ್ಲಿ ಇವತ್ತು ಮಳೆಯಾಗಲಿದೆ, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?


ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200

