ಸೊರಬ: ಮದ್ಯ ಸೇವಿಸುತ್ತಿದ್ದ ವೇಳೆ ಮಾವ–ಅಳಿಯನ ನಡುವೆ ಉಂಟಾದ ಜಗಳ (Altercation) ಅಳಿಯನ ಕೊಲೆಯಲ್ಲಿ ಅಂತ್ಯವಾಗಿದೆ. ಆನವಟ್ಟಿ ಜಡೆ ಗ್ರಾಮದಲ್ಲಿ ಗುರುವಾರ ರಾತ್ರಿ ಘಟನೆ ಸಂಭವಿಸಿದೆ.
ಗ್ರಾಮದ ಪ್ರಿಯದರ್ಶಿನಿ ಹೋಟೆಲ್ನಲ್ಲಿ ಕಮರೂರು ಗೋಮಾಳ ಪ್ರದೇಶದ ನಿವಾಸಿ ರವೀಂದ್ರ ಹಾಗೂ ಆತನ ಮಾವ ಉಮೇಶ್ ಮದ್ಯಪಾನ ಮಾಡಿದ್ದಾರೆ. ಈ ವೇಳೆ ನಡೆದ ಮಾತುಕತೆ ಜಗಳಕ್ಕೆ ತಿರುಗಿದೆ. ಆಗ ಉಮೇಶ್ ಹೋಟೆಲ್ನಲ್ಲಿದ್ದ ಪೇಪರ್ ಕತ್ತರಿಸುವ ಕತ್ತರಿಯಿಂದ ರವೀಂದ್ರನ (34) ಎದೆಗೆ ಇರಿದಿದ್ದಾನೆ.
ತೀವ್ರ ಗಾಯಗೊಂಡಿದ್ದ ರವೀಂದ್ರನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ. ಈ ಸಂಬಂಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದ ಹವಾಮಾನ ವರದಿ | 7 ಜೂನ್ 2025 | ಜಿಲ್ಲೆಯಲ್ಲಿ ಇವತ್ತು ಮಳೆಯಾಗಲಿದೆ, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200