ನಡು ಬೀದಿಯಲ್ಲಿ ವಿಷ ಸೇವಿಸಿದ ವ್ಯಾಪಾರಿ, ಮಧು ಬಂಗಾರಪ್ಪ ಎಂಟ್ರಿ ಬಳಿಕ ಕಾರ್ಯಾಚರಣೆ ಸ್ಥಗಿತ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | SORABA | 14 ಜುಲೈ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಬೀದಿ ಬದಿ ಅಂಗಡಿ (ROAD SIDE VENDOR) ತೆರವು ಕಾರ್ಯಾಚರಣೆ ವೇಳೆ ವ್ಯಾಪಾರಿಯೊಬ್ಬರು ವಿಷ (POISON) ಸೇವಿಸಿದ್ದಾರೆ. ಇದರಿಂದ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

Shimoga Nanjappa Hospital

ಸೊರಬ ತಾಲೂಕಿನ ಆನವಟ್ಟಿಯ (ANAVATTI) ಹಾನಗಲ್ – ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿರುವ ಬೀದಿಬದಿ ವ್ಯಾಪಾರಿಗಳ ಅಂಡಿಗಳನ್ನು ಪಟ್ಟಣ ಪಂಚಾಯಿತಿ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು.

ಸಾರ್ವಜನಿಕ ಸಮುದಾಯ ಆಸ್ಪತ್ರೆ, ನಾಡಕಚೇರಿ ಹಾಗೂ ಪಟ್ಟಣ ಪಂಚಾಯಿತಿ ಮುಂಭಾಗ ಸೇರಿದಂತೆ ರಸ್ತೆಯ ಉದ್ದಕ್ಕೂ 60ಕ್ಕಿಂತ ಹೆಚ್ಚು ಗೂಡಂಗಡಿಗಳು ಇದ್ದು 25ಕ್ಕಿಂತ ಹೆಚ್ಚು ಅಂಗಡಿಗಳನ್ನು ತೆರವು ಮಾಡಲಾಯಿತು. ಈ ಬಗ್ಗೆ ವ್ಯಾಪಾರಿಗಳ ಜತೆ ಅಧಿಕಾರಿಗಳು ಸಭೆ ನಡೆಸಿ ತಿಳಿವಳಿಕೆ ನೀಡಿದ್ದರು. ಕೆಲವರು ತಾವೇ ಸ್ವತಃ ತೆರವುಗೊಳಿಸಲು ಮುಂದಾದರೆ ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರು.

ವಿಷ ಸೇವಿಸಿದ ವ್ಯಾಪಾರಿ

ಕಬ್ಬು ಅರೆಯುವ ಅಂಗಡಿಯನ್ನು ತರೆವುಗೊಳಿಸಲು ಮುಂದಾದಾಗ ಮಲ್ಲಾಪುರದ ವೀರಭದ್ರಪ್ಪ ಎಂಬಾತ ವಿಷ ಸೇವನೆ ಮಾಡಿದರು. ಇದರಿಂದ ಕೆಲವು ಹೊತ್ತು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಕೂಡಲೆ ಅವರನ್ನು ಶಿಕಾರಿಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳಕ್ಕೆ ಮಧು ಬಂಗಾರಪ್ಪ ಭೇಟಿ

ಮಾಜಿ ಶಾಸಕ ಮಧು ಬಂಗಾರಪ್ಪ ಸ್ಥಳಕ್ಕೆ ಧಾವಿಸಿ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು. ವ್ಯಾಪಾರಕ್ಕೆ ಸೂಕ್ತ ಸ್ಥಳವನ್ನು ಗುರುತಿಸಿ ಆ ಬಳಿಕ ಅಂಗಡಿಗಳನ್ನು ತೆರವುಗೊಳಿಸಿ. ಅಂಗಡಿ ತೆಗೆದುಕೊಳ್ಳಲು ವ್ಯಾಪಾರಿಗಳಿಗೆ ಇನ್ನಷ್ಟು ದಿನ ಕಾಲವಕಾಶ ನೀಡಿ ಎಂದು ಮನವಿ ಮಾಡಿದರು. ಬಳಿಕ ಅಧಿಕಾರಿಗಳು ಕಾರ್ಯಾಚರಣೆ ಸ್ಥಗಿತ ಗೊಳಿಸಿದರು.

ಇದನ್ನೂ ಓದಿ – ಸಾಗರ – ಸಿಗಂದೂರು ಮಾರ್ಗದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

ಪಿಡಬ್ಲುಡಿ ಇಂಜಿನಿಯರ್ ಚಂದ್ರಪ್ಪ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಮೇಶ್, ಕಂದಾಯಿ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿದ್ದರು.

ಇದನ್ನೂ ಓದಿ – ಮಹಿಳೆಯರಿಗೆ ಆನ್ ಲೈನ್ ಮೂಲಕವೇ ಸಂಗೀತ ಶಿಬಿರ, ಹೇಗೆ? ಯಾರೆಲ್ಲ ಸೇರಬಹುದು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment