ಶಿವಮೊಗ್ಗ ಲೈವ್.ಕಾಂ | ANAVATTI NEWS | 14 JUNE 2021
ದೇವಸ್ಥಾನದ ಹುಂಡಿ ಒಡೆದ ಕಳ್ಳರು ನೋಟುಗಳನ್ನಷ್ಟೆ ಕದ್ದೊಯ್ದಿದ್ದಾರೆ. ಈ ಸಂಬಂಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತೆ ಮಾರ್ಕೆಟ್ ಸರ್ಕಲ್ ಬಳಿ ಇರುವ ಬಾನಿ ಚೌಡೇಶ್ವರಿ ದೇವಸ್ಥಾನದಲ್ಲಿ ಕಳ್ಳರು ಹುಂಡಿ ಒಡೆದಿದ್ದಾರೆ. ಚಿಲ್ಲರೆ ಹಣವನ್ನು ಬಿಟ್ಟು ನೋಟುಗಳನ್ನು ಮಾತ್ರ ಕದ್ದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.
ಕಳ್ಳತನಕ್ಕೆ ಬ್ರೇಕ್ ಹಾಕಲು ಈ ಭಾಗದಲ್ಲಿ ಸಿಸಿಟಿವಿಯನ್ನು ಅಳವಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200