ಚಂದ್ರಗುತ್ತಿ ದೇವಸ್ಥಾನದ ಹುಂಡಿ ಎಣಿಕೆ, ಹರಿದು ಬಂತು ಲಕ್ಷ ಲಕ್ಷ ಕಾಣಿಕೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 16 FEBRURARY 2023

SORABA : ತಾಲೂಕಿನ ಚಂದ್ರಗುತ್ತಿಯ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶೀ ರೇಣುಕಾಂಬ ದೇವಸ್ಥಾನದ ಹುಂಡಿ (Hundi) ಎಣಿಕೆ ಕಾರ್ಯ ಆಡಳಿತ ಮಂಡಳಿ ಕಚೇರಿಯಲ್ಲಿ ನಡೆಯಿತು. 25 ಲಕ್ಷ ರೂ. ಕಾಣಿಕೆ ಸಂಗ್ರಹವಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Chandragutti-Temple-Hundi-Counting

ತಾಲೂಕು  ದಂಡಾಧಿಕಾರಿ ಹುಸೇನ್ ಸರಕಾವಸ್ ಅವರ ಸಮ್ಮುಖದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆಸಲಾಯಿತು. ಫೆಬ್ರವರಿ ತಿಂಗಳಿನಲ್ಲಿ ಹುಂಡಿ ಹಣ ಏಣಿಸಿದಾಗ 25,67,710 ರೂ., ಸಂಗ್ರಹವಾಗಿದೆ.

2022 ಮಾರ್ಚ್, ಮೇ, ಜುಲೈ, ಸೆಪ್ಟೆಂಬರ್, ನವೆಂಬರ್ ತಿಂಗಳಿನಲ್ಲಿ  ಹುಂಡಿ (Hundi) ಹಣ ಎಣಿಕೆ ಮಾಡಿದಾಗ 94,65,575 ರೂ, ಸಂಗ್ರಹವಾಗಿತ್ತು. ಕೇವಲ 12 ತಿಂಗಳಗಳಲ್ಲಿ ದೇವಸ್ಥಾನದ  ಗರಿಷ್ಠ ಮೊತ್ತದ ಕಾಣಿಕೆ ಹಣ 1,20,33,285 ರೂ., ಸಂಗ್ರಹವಾಗಿದೆ. ಎಣಿಕೆ ಕಾರ್ಯ ನಡೆಯುವ ಕೊಠಡಿ ಸುತ್ತ ಸಿ.ಸಿ ಕ್ಯಾಮೆರಾ ಆಳವಡಿಸಲಾಗಿತ್ತು.

ಇದನ್ನೂ ಓದಿ – ಬಾಕ್ಸ್ ತುಂಬಾ ದುಡ್ಡಿದೆ ಅಂತಾ ಕೊಟ್ಟರು, ಎಣಿಸಲು ತೆಗೆದಾಗ ಕಾದಿತ್ತು ಶಾಕ್, ಇಂತವರ ಬಗ್ಗೆ ಹುಷಾರ್

ಹುಂಡಿ ಎಣಿಕೆ ಕಾರ್ಯದಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾ ಅಧಿಕಾರಿಗಳು, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಮುಜರಾಯಿ ಇಲಾಖೆ ವಿಷಯ ನಿರ್ವಾಹಕರು, ತಾಲೂಕು ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರು ಮತ್ತು ದೇವಸ್ಥಾನದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ – ಶಿವಮೊಗ್ಗದ ಆಟೋಗಳಿಗೆ ಪೊಲೀಸರಿಂದ 3 ಸೂಚನೆ, ಡಿಸ್ ಪ್ಲೇ ಕಾರ್ಡ್ ವಿತರಣೆ, ಏನಿದು? ಕಾರ್ಡಿನಲ್ಲಿ ಏನೇನಿದೆ?

ಭಕ್ತರ ಮೂಲಕ ದೇವಸ್ಥಾನಕ್ಕೆ ಕೋಟ್ಯಾಂತರ ಆದಾಯ ಸಂಗ್ರವಾಗುತ್ತದೆ. ಆದರೆ ಬರುವ ಭಕ್ತರಿಗೆ ಕುಡಿಯುವ ನೀರು, ವಸತಿ, ಶೌಚಾಲಯ ಮತ್ತು ಮೂಲ ಸೌಕರ್ಯಗಳು ಇಲ್ಲ. ಕ್ಷೇತ್ರ ಅಭಿವೃದ್ಧಿ ಆಗುತ್ತಿಲ್ಲ ಎಂದು ಭಕ್ತರು ಆರೋಪಿಸಿದ್ದಾರೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment