ಶಿವಮೊಗ್ಗ ಲೈವ್.ಕಾಂ | SORABA NEWS | 6 MARCH 2021
ಚಂದ್ರಗುತ್ತಿ ರೇಣುಕಾಂಬಾ ದೇವಿ ದೇವಾಲಯದ ಕಾರ್ಯಾಲಯದಲ್ಲಿ ಜಾತ್ರೋತ್ಸವದ ಪೂರ್ವಭಾವಿ ಸಭೆ ನಡೆಸಲಾಯಿತು. ಗ್ರಾಮಸ್ಥರು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಜಾತ್ರೆಯ ಕುರಿತು ಮಹತ್ವದ ಚರ್ಚೆ ನಡೆಸಲಾಯಿತು.
![]() |
ಏನೆಲ್ಲ ಚರ್ಚೆ ಮಾಡಲಾಯಿತು?
ಚಂದ್ರಗುತ್ತಿ ರೇಣುಕಾಂಬಾ ದೇವಿಗೆ ದೊಡ್ಡ ಸಂಖ್ಯೆಯಲ್ಲಿ ಭಕ್ತರಿದ್ದಾರೆ. ಹೊರ ಜಿಲ್ಲೆಗಳಿಂದಲೂ ಇಲ್ಲಿಗೆ ಭಕ್ತರು ಬರುತ್ತಾರೆ. ಜಾತ್ರೆಯಲ್ಲಿ ಸಾವಿರ ಸಾವಿರ ಸಂಖ್ಯೆಯಲ್ಲಿ ಭಕ್ತರು ಸೇರುತ್ತಾರೆ.
ಕರೋನ ಇರುವುದರಿಂದ ದೊಡ್ಡ ಸಂಖ್ಯೆಯ ಭಕ್ತರ ನಿಯಂತ್ರಣ ಕಷ್ಟವಾಗಲಿದೆ. ಆದ್ದರಿಂದ ಜಾತ್ರೆ ರದ್ದುಗೊಳಿಸಬೇಕು. ಸರಳವಾಗಿ ಪೂಜಾ ವಿಧಿವಿಧಾನಗಳನ್ನು ಅನುಸರಿಸಲು ಅವಕಾಶ ನೀಡಬೇಕು ಎಂದು ಪೊಲೀಸರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಸಭೆಗೆ ಮನವರಿಕೆ ಮಾಡಿಕೊಟ್ಟರು.
ಜಾತ್ರೆ ಸಂದರ್ಭದಲ್ಲಿ ಭಕ್ತರನ್ನು ನಿಯಂತ್ರಿಸಿದರೆ ಅಮವಾಸ್ಯೆ ಮತ್ತು ಹುಣ್ಣಿಮೆ ಸಂದರ್ಭದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಲಿದೆ. ಆಗಲೂ ಭಕ್ತರ ನಿಯಂತ್ರಣ ಕಷ್ಟವಾಗಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಮತ್ತು ಗ್ರಾಮಸ್ಥರು ತಿಳಿಸಿದರು.
ಡಿಸಿ ಜೊತೆ ವಿಚಾರ ಚರ್ಚೆ
ಸಾರ್ವಜನಿಕರು ಮತ್ತು ಅಧಿಕಾರಿಗಳಿಂದ ಮಹಿತಿ ಪಡೆದ ಸಾಗರ ಉಪ ವಿಭಾಗಾಧಿಕಾರಿ ಡಾ. ಎಲ್.ನಾಗರಾಜ್, ಈ ಸಭೆಯಲ್ಲಿ ಚರ್ಚೆಯಾದ ವಿಚಾರಗಳನ್ನು ಜಿಲ್ಲಾಧಿಕಾರಿ ಅವರಿಗೆ ತಿಳಿಸಲಾಗುತ್ತದೆ. ಆ ಬಳಿಕ ಅಂತಿಮ ತೀರ್ಮಾನ ಪ್ರಕಟಿಸಲಾಗುತ್ತದೆ ಎಂದರು.
ಜಾತ್ರೆಗೆ ಸಿದ್ಧತೆ ಜೋರು
ಚಂದ್ರಗುತ್ತಿ ರೇಣುಕಾಂಬಾ ದೇವಿಯ ಜಾತ್ರೋತ್ಸವಕ್ಕೆ ಗ್ರಾಮಸ್ಥರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಮಾರ್ಚ್ 19ರಂದು ಜಾತ್ರೆ ಆರಂಭವಾಗಲಿದೆ. ಮಾರ್ಚ್ 21ರಂದು ಹೂವಿನ ರಥ, ಮಾ.22ರಂದು ಮಹಾರಥೋತ್ಸವ ನಡೆಯಲಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200