ಕಾರು, ಬೈಕ್‌ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಗೆ ನೆರವಾದ ಶಿವಮೊಗ್ಗ ಜಿಲ್ಲಾಧಿಕಾರಿ, ಆಗಿದ್ದೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಸೊರಬ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿಯವರು ಇಂದು ಸೊರಬ ತಾಲೂಕಿನ ವಿವಿಧೆಡೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು. ಈ ನಡುವೆ, ಮಾರ್ಗಮಧ್ಯೆ ಸಂಭವಿಸಿದ ರಸ್ತೆ ಅಪಘಾತದ ಸಂತ್ರಸ್ತರ (victim) ನೆರವಿಗೆ ನಿಲ್ಲುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಗಾಯಾಳುಗಳಿಗೆ ನೆರವು

ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸಾಗರದಿಂದ ಸೊರಬಕ್ಕೆ ತೆರಳುತ್ತಿದ್ದಾಗ ಮಾರ್ಗಮಧ್ಯೆ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಇದನ್ನು ಗಮನಿಸಿದ ಕೂಡಲೇ ತಮ್ಮ ವಾಹನವನ್ನು ನಿಲ್ಲಿಸಿದ ಅವರು, ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲು ಅಗತ್ಯ ವ್ಯವಸ್ಥೆ ಮಾಡಿ ನೆರವಾದರು.

Shimoga-DC-Prabhulinga-Kavalikatti-helps-a-injured-in-Soraba

ಡಿಸಿ ಭೇಟಿಯ ಪ್ರಮುಖಾಂಶಗಳು

  • ಅಟಲ್‌ಜೀ ಜನಸ್ನೇಹಿ ಕೇಂದ್ರ: ಉಳವಿಯಲ್ಲಿರುವ ಅಟಲ್‌ಜೀ ಜನಸ್ನೇಹಿ ಕೇಂದ್ರಕ್ಕೆ ಭೇಟಿ ನೀಡಿ ಸಾರ್ವಜನಿಕ ಸೇವೆಗಳ ವಿತರಣೆಯನ್ನು ಪರಿಶೀಲಿಸಿದರು.
  • ತಾಲೂಕು ಕಚೇರಿ ಸಭೆ: ಸೊರಬ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬಾಕಿ ಇರುವ ಕೆಲಸಗಳನ್ನು ತ್ವರಿತವಾಗಿ ಮುಗಿಸಲು ಸೂಚನೆ ನೀಡಿದರು.
  • ಬಂಗಾರಧಾಮ ಉದ್ಯಾನ: ಸೊರಬದ ಪ್ರಸಿದ್ಧ ‘ಬಂಗಾರಧಾಮ ಉದ್ಯಾನ’ಕ್ಕೆ ಭೇಟಿ ನೀಡಿ ಅಲ್ಲಿನ ನಿರ್ವಹಣೆ ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಒಂದೂವರೆ ಎಕರೆಯಲ್ಲಿ ಅಪಾರ್ಟ್‌ಮೆಂಟ್‌, 100 ಅಡಿ ರೆಸ್ತೆಯಲ್ಲಿ ದೊಡ್ಡ ಮಾಲ್‌

ಭೇಟಿ ಸಂದರ್ಭ ಶಿರಸ್ತೇದಾರ್ ಚೇತನ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

dc2
dc1

ಇದನ್ನೂ ಓದಿ – ಜಾಗ ಗುರುತಿಸಬೇಕು, ಮಾರ್ಚ್‌ ಒಳಗೆ ಕಾಮಗಾರಿ ಪೂರ್ಣಗೊಳ್ಳಬೇಕು, ಡಿಸಿ ಖಡಕ್‌ ಸೂಚನೆ

JNNCE-COLLEGE-ADVT.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment