ಕಾರು, ಬೈಕ್‌ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಗೆ ನೆರವಾದ ಶಿವಮೊಗ್ಗ ಜಿಲ್ಲಾಧಿಕಾರಿ, ಆಗಿದ್ದೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಸೊರಬ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿಯವರು ಇಂದು ಸೊರಬ ತಾಲೂಕಿನ ವಿವಿಧೆಡೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು. ಈ ನಡುವೆ, ಮಾರ್ಗಮಧ್ಯೆ ಸಂಭವಿಸಿದ ರಸ್ತೆ ಅಪಘಾತದ ಸಂತ್ರಸ್ತರ (victim) ನೆರವಿಗೆ ನಿಲ್ಲುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಗಾಯಾಳುಗಳಿಗೆ ನೆರವು

ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸಾಗರದಿಂದ ಸೊರಬಕ್ಕೆ ತೆರಳುತ್ತಿದ್ದಾಗ ಮಾರ್ಗಮಧ್ಯೆ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಇದನ್ನು ಗಮನಿಸಿದ ಕೂಡಲೇ ತಮ್ಮ ವಾಹನವನ್ನು ನಿಲ್ಲಿಸಿದ ಅವರು, ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲು ಅಗತ್ಯ ವ್ಯವಸ್ಥೆ ಮಾಡಿ ನೆರವಾದರು.

Shimoga-DC-Prabhulinga-Kavalikatti-helps-a-injured-in-Soraba

Shimoga-DC-Prabhulinga-Kavalikatti-helps-a-injured-in-Soraba

ಡಿಸಿ ಭೇಟಿಯ ಪ್ರಮುಖಾಂಶಗಳು

  • ಅಟಲ್‌ಜೀ ಜನಸ್ನೇಹಿ ಕೇಂದ್ರ: ಉಳವಿಯಲ್ಲಿರುವ ಅಟಲ್‌ಜೀ ಜನಸ್ನೇಹಿ ಕೇಂದ್ರಕ್ಕೆ ಭೇಟಿ ನೀಡಿ ಸಾರ್ವಜನಿಕ ಸೇವೆಗಳ ವಿತರಣೆಯನ್ನು ಪರಿಶೀಲಿಸಿದರು.
  • ತಾಲೂಕು ಕಚೇರಿ ಸಭೆ: ಸೊರಬ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬಾಕಿ ಇರುವ ಕೆಲಸಗಳನ್ನು ತ್ವರಿತವಾಗಿ ಮುಗಿಸಲು ಸೂಚನೆ ನೀಡಿದರು.
  • ಬಂಗಾರಧಾಮ ಉದ್ಯಾನ: ಸೊರಬದ ಪ್ರಸಿದ್ಧ ‘ಬಂಗಾರಧಾಮ ಉದ್ಯಾನ’ಕ್ಕೆ ಭೇಟಿ ನೀಡಿ ಅಲ್ಲಿನ ನಿರ್ವಹಣೆ ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಒಂದೂವರೆ ಎಕರೆಯಲ್ಲಿ ಅಪಾರ್ಟ್‌ಮೆಂಟ್‌, 100 ಅಡಿ ರೆಸ್ತೆಯಲ್ಲಿ ದೊಡ್ಡ ಮಾಲ್‌

ಭೇಟಿ ಸಂದರ್ಭ ಶಿರಸ್ತೇದಾರ್ ಚೇತನ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

dc2
dc1

ಇದನ್ನೂ ಓದಿ – ಜಾಗ ಗುರುತಿಸಬೇಕು, ಮಾರ್ಚ್‌ ಒಳಗೆ ಕಾಮಗಾರಿ ಪೂರ್ಣಗೊಳ್ಳಬೇಕು, ಡಿಸಿ ಖಡಕ್‌ ಸೂಚನೆ

JNNCE-COLLEGE-ADVT.

Leave a Comment