ಶಿವಮೊಗ್ಗ ಲೈವ್.ಕಾಂ | SORABA NEWS | 31 ಆಗಸ್ಟ್ 2020
ಹುಚ್ಚು ನಾಯಿಗೆ ಖೆಡ್ಡಾ ತೋಡಲು ಹೋಗಿ ವ್ಯಕ್ತಿಯೊಬ್ಬ ಬಲಿಯಾದ ಘಟನೆ ಸೊರಬ ಪಟ್ಟಣದ ಕಾನಕೇರಿ ಬಡಾವಣೆಯಲ್ಲಿ ತಡರಾತ್ರಿ ವರದಿಯಾಗಿದೆ.
ಸೊರಬ ಪಟ್ಟಣದ ಕಾನಕೇರಿ ಬಡಾವಣೆಯಲ್ಲಿ ಮನೆಯ ಅಂಗಳಕ್ಕೆ ಹಾಗೂ ಮನೆಯ ಒಳಗಡೆ ಹುಚ್ಚುನಾಯಿ ಬರುತ್ತದೆ ಎಂದು ಮನೆಯ ಮಾಲಿಕ ನಿಂಗಪ್ಪ ಪುಟ್ಟಪ್ಪ (58) ಗೇಟ್ ಮುಂಭಾಗ ತಂತಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾನೆ. ರಾತ್ರಿ ಮೂತ್ರ ಮಾಡಲು ತೆರಳಿದಾಗ ಆತ ಅದೇ ತಂತಿ ತುಳಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಹುಚ್ಚುನಾಯಿಗೆ ಖೆಡ್ಡಾ ತೋಡಲು ಹೋಗಿ ಆತನೇ ಮೃತಪಟ್ಟಿರುವುದು ದುರ್ದೈವ. ಮೃತ ನಿಂಗಪ್ಪನ ಪುತ್ರ ರಾಕೇಶ್ ಕುಮಾರ್ ನೀಡಿದ ಹೇಳಿಕೆ ಅನ್ವಯ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200