ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್‌, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್‌, ಏನಿದು?

Published On : ಏಪ್ರಿಲ್ 6, 2026

Published By : ನಿತಿನ್‌ ಆರ್‌.ಕೈದೊಟ್ಲು 

ಆನವಟ್ಟಿ: ಪಟ್ಟಣದ ಕರ್ನಾಟಕ ಬ್ಯಾಂಕ್ ಎಟಿಎಂ ಕೇಂದ್ರದಲ್ಲಿ ವ್ಯಕ್ತಿಯೊಬ್ಬರ ಗಮನ ಬೇರೆಡೆ ಸೆಳೆದ ಅಪರಿಚಿತನೊಬ್ಬ, ATM ಕಾರ್ಡ್ ಅದಲು ಬದಲು ಮಾಡಿ ₹28,000 ಹಣ ಡ್ರಾ ಮಾಡಿಕೊಂಡಿರುವ ಘಟನೆ ನಡೆದಿದೆ. ಮೂಗುರು ಗ್ರಾಮದ ಮಂಜುನಾಥ ಎಂಬುವವರು ಹಣ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ : ಫೋನ್‌‌ ಕರೆ, ಶಿವಮೊಗ್ಗದಿಂದ ವ್ಯಕ್ತಿ ದೌಡು, ಆನವಟ್ಟಿ ಮನೆ ಬಳಿ ಕಾದಿತ್ತು ಶಾಕ್

ಮಂಜುನಾಥ ಅವರು ತಮ್ಮ ಪತ್ನಿಯ ಖಾತೆಯಿಂದ ಹಣ ಡ್ರಾ ಮಾಡಲು ಎಟಿಎಂಗೆ ತೆರಳಿದ್ದರು. ಈ ವೇಳೆ ಅಲ್ಲಿಗೆ ಬಂದ ಅಪರಿಚಿತನೊಬ್ಬ ಮಂಜುನಾಥ ಅವರ ಬಳಿಯಿದ್ದ ಕಾರ್ಡ್ ಅನ್ನು ಅದಲು ಬದಲು ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅದೇ ಕಾರ್ಡ್ ಬಳಸಿ ಬ್ಯಾಂಕ್ ಆಫ್ ಬರೋಡಾದ ಎಟಿಎಂನಲ್ಲಿ ₹23,000, ಮರುದಿನ ₹5,000 ಸೇರಿ ಒಟ್ಟು ₹28,000 ಹಣ ಡ್ರಾ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಇದನ್ನೂ ಓದಿ : ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 6, 2026

Leave a Comment