ಸೊರಬ: ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದ ಕಾಣಿಕೆ ಹುಂಡಿ ಎಣಿಕೆ ಕಾರ್ಯವು ದೇವಸ್ಥಾನದ ಆಡಳಿತ ಮಂಡಳಿ ಕಚೇರಿಯಲ್ಲಿ ನಡೆಯಿತು. ಈ ಬಾರಿ ದೇವಿಯ ಸನ್ನಿಧಿಯಲ್ಲಿ ಒಟ್ಟು ₹33,90,580 ಕಾಣಿಕೆ ಹಣ ಸಂಗ್ರಹವಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಸುದ್ದಿಯ ಮುಂದಿನ ಭಾಗ ಕೆಳಗಿದೆ
ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಮೀಳಾ ಕುಮಾರಿ ಅವರ ನೇತೃತ್ವದಲ್ಲಿ ಹುಂಡಿ ಎಣಿಕೆ ಪ್ರಕ್ರಿಯೆ ನಡೆಸಲಾಯಿತು. ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ಹುಂಡಿ ಎಣಿಕೆಯ ವೇಳೆಯಲ್ಲಿ ಒಟ್ಟು ₹14,20,755 ಸಂಗ್ರಹವಾಗಿತ್ತು.

ಹುಂಡಿ ಎಣಿಕೆ ಕಾರ್ಯವು ಅತ್ಯಂತ ಪಾರದರ್ಶಕವಾಗಿ ನಡೆಯಲು ಎಣಿಕೆ ಕಾರ್ಯ ನಡೆಯುವ ಕೊಠಡಿಯ ಸುತ್ತಲೂ ಸಿಸಿಟಿವಿ (CCTV) ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಭದ್ರತೆಯನ್ನು ನಿಯೋಜಿಸಲಾಗಿತ್ತು. ಮುಜರಾಯಿ ಇಲಾಖೆ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು, ದೇವಸ್ಥಾನದ ಸಿಬ್ಬಂದಿ ಪಾಲ್ಗೊಂಡಿದ್ದರು.

ಇದನ್ನೂ ಓದಿ:➤ ಅರಣ್ಯ ಪ್ರದೇಶದಲ್ಲಿ ಚಿರತೆ ಅನುಮಾನಾಸ್ಪದ ಸಾವು