‘ಎಲೆಕ್ಷನ್ ಮುಗಿಸಿ ಪ್ಯಾಕೇಜ್ ಟೂರ್ ಹೋದರು, ಅಭ್ಯರ್ಥಿಯಾದ್ರೂ ಪ್ಯಾಕೇಜ್ ಬರುವವರೆಗೆ ನನ್ನ ತಮ್ಮ ಕ್ಷೇತ್ರಕ್ಕೇ ಬಂದಿರಲಿಲ್ಲ’

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | 03 ಏಪ್ರಿಲ್ 2019

ಕರೆಕ್ಟಾದ ಪ್ಯಾಕೇಜ್ ಬಾರದೆ ಇದ್ದಿದ್ದರಿಂದಲೇ, ಮುಖ್ಯಮಂತ್ರಿ ಶಿವಮೊಗ್ಗ ಭೇಟಿ ವೇಳೆ ನನ್ನ ತಮ್ಮ ಕಾಣಿಸಲಿಲ್ಲ. ಪ್ಯಾಕೇಜ್ ಕುರಿತು ಸ್ಪಷ್ಟತೆ ಸಿಗುವವರೆಗೂ ಅಭ್ಯರ್ಥಿಯಾಗಿ ಅವರು ಕ್ಷೇತ್ರಕ್ಕೆ ಬರಲಿಲ್ಲ. ಹೀಗಂತ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ವಿರುದ್ಧ ಸೊರಬ ಶಾಸಕ ಕುಮಾರ್ ಬಂಗಾರಪ್ಪ ಗಂಭೀರ ಆರೋಪ ಮಾಡಿದ್ದಾರೆ.

ಸೊರಬ ತಾಲೂಕು ಕೋಟಿಪುರ ಗ್ರಾಮದ ಪ್ರಚಾರ ಸಭೆಯಲ್ಲಿ ಮಾತನಾಡಿದ ಕುಮಾರ್ ಬಂಗಾರಪ್ಪ, ವಿಧಾನಸಭೆ ಚುನಾವಣೆ ಬಳಿಕ ಪ್ಯಾಕೇಜ್ ಟೂರ್ ಹೋದವರು, ಮಧ್ಯರಾತ್ರಿ ಮೂರು ಗಂಟೆಗೆ ಬಿ ಫಾರಂ ಪಡೆದು ಉಪಚುನಾವಣೆ ಸ್ಪರ್ಧಿಸಲು ಬಂದರು. ಸೋತ ಬಳಿಕ ಮತ್ತೆ ಟೂರ್ ಹೋದವರು ಚುನಾವಣೆಗೆ ಸ್ಪರ್ಧಿಸಲು ಮರಳಿದ್ದಾರೆ ಎಂದು ಮಧು ಬಂಗಾರಪ್ಪ ವಿರುದ್ಧ ಲೇವಡಿ ಮಾಡಿದರು.

ಜನರೇ ಐದು ವರ್ಷದ ಪ್ಯಾಕೇಜ್ ನೀಡಿದ್ದರು

ಐದು ವರ್ಷ ಕ್ಷೇತ್ರಕ್ಕಾಗಿ ದುಡಿಯುವುದಕ್ಕೆ ಅಂತಲೇ ಜನ ಐದು ವರ್ಷದ ಪ್ಯಾಕೇಜ್ ನೀಡಿದ್ದರು. ಅದರೆ ಆಗ ಕೆಲಸ ಮಾಡಲಿಲ್ಲ. ಅವರ ಅವಧಿಯಲ್ಲಿ ಯಾವುದಾದರೂ ಒಂದೇ ಒಂದು ಯೋಜನೆ ಪೂರ್ಣವಾಗಿದೆಯೇ ಎಂದು ಕುಮಾರ್ ಬಂಗಾರಪ್ಪ ಸವಾಲು ಹಾಕಿದರು.

ಇದಕ್ಕೂ ಮೊದಲು ಸೊರಬ ತಾಲೂಕಿನ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಜೊತೆಯಲ್ಲಿ ಕುಮಾರ್ ಬಂಗಾರಪ್ಪ ಪ್ರಚಾರ ನಡೆಸಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment