| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | 03 ಏಪ್ರಿಲ್ 2019
ಕರೆಕ್ಟಾದ ಪ್ಯಾಕೇಜ್ ಬಾರದೆ ಇದ್ದಿದ್ದರಿಂದಲೇ, ಮುಖ್ಯಮಂತ್ರಿ ಶಿವಮೊಗ್ಗ ಭೇಟಿ ವೇಳೆ ನನ್ನ ತಮ್ಮ ಕಾಣಿಸಲಿಲ್ಲ. ಪ್ಯಾಕೇಜ್ ಕುರಿತು ಸ್ಪಷ್ಟತೆ ಸಿಗುವವರೆಗೂ ಅಭ್ಯರ್ಥಿಯಾಗಿ ಅವರು ಕ್ಷೇತ್ರಕ್ಕೆ ಬರಲಿಲ್ಲ. ಹೀಗಂತ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ವಿರುದ್ಧ ಸೊರಬ ಶಾಸಕ ಕುಮಾರ್ ಬಂಗಾರಪ್ಪ ಗಂಭೀರ ಆರೋಪ ಮಾಡಿದ್ದಾರೆ.
ಸೊರಬ ತಾಲೂಕು ಕೋಟಿಪುರ ಗ್ರಾಮದ ಪ್ರಚಾರ ಸಭೆಯಲ್ಲಿ ಮಾತನಾಡಿದ ಕುಮಾರ್ ಬಂಗಾರಪ್ಪ, ವಿಧಾನಸಭೆ ಚುನಾವಣೆ ಬಳಿಕ ಪ್ಯಾಕೇಜ್ ಟೂರ್ ಹೋದವರು, ಮಧ್ಯರಾತ್ರಿ ಮೂರು ಗಂಟೆಗೆ ಬಿ ಫಾರಂ ಪಡೆದು ಉಪಚುನಾವಣೆ ಸ್ಪರ್ಧಿಸಲು ಬಂದರು. ಸೋತ ಬಳಿಕ ಮತ್ತೆ ಟೂರ್ ಹೋದವರು ಚುನಾವಣೆಗೆ ಸ್ಪರ್ಧಿಸಲು ಮರಳಿದ್ದಾರೆ ಎಂದು ಮಧು ಬಂಗಾರಪ್ಪ ವಿರುದ್ಧ ಲೇವಡಿ ಮಾಡಿದರು.
ಜನರೇ ಐದು ವರ್ಷದ ಪ್ಯಾಕೇಜ್ ನೀಡಿದ್ದರು
ಐದು ವರ್ಷ ಕ್ಷೇತ್ರಕ್ಕಾಗಿ ದುಡಿಯುವುದಕ್ಕೆ ಅಂತಲೇ ಜನ ಐದು ವರ್ಷದ ಪ್ಯಾಕೇಜ್ ನೀಡಿದ್ದರು. ಅದರೆ ಆಗ ಕೆಲಸ ಮಾಡಲಿಲ್ಲ. ಅವರ ಅವಧಿಯಲ್ಲಿ ಯಾವುದಾದರೂ ಒಂದೇ ಒಂದು ಯೋಜನೆ ಪೂರ್ಣವಾಗಿದೆಯೇ ಎಂದು ಕುಮಾರ್ ಬಂಗಾರಪ್ಪ ಸವಾಲು ಹಾಕಿದರು.
ಇದಕ್ಕೂ ಮೊದಲು ಸೊರಬ ತಾಲೂಕಿನ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಜೊತೆಯಲ್ಲಿ ಕುಮಾರ್ ಬಂಗಾರಪ್ಪ ಪ್ರಚಾರ ನಡೆಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
![]()