ಸೊರಬ : ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದವರಿಗೆ ಸಚಿವ ಮಧು ಬಂಗಾರಪ್ಪ ನೆರವಾಗಿದ್ದಾರೆ. ಗಾಯಾಳುಗಳನ್ನು (Injured) ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಇನ್ನು, ಅಪಘಾತಪಡಿಸಿ ಸ್ಥಳದಿಂದ ಪರಾರಿಯಾಗಿರುವ ಕಾರನ್ನು ಪತ್ತೆ ಹಚ್ಚುವಂತೆ ಸಚಿವ ಮಧು ಬಂಗಾರಪ್ಪ ಪೊಲೀಸರಿಗೆ ಸೂಚನೆ ನೀಡಿದರು.
ಇದನ್ನೂ ಓದಿ » ಶಿವಮೊಗ್ಗ ಬದಲು ಬೆಳಗಾವಿಯಲ್ಲಿ ಇಳಿದ ವಿಮಾನ, ಪ್ರಯಾಣಿಕರ ಪರದಾಟ, ಆಗಿದ್ದೇನು?
ಸೊರಬ ತಾಲೂಕು ಕುಪ್ಪಗಡ್ಡೆ ಬೈಕ್ಗೆ ಡಿಕ್ಕಿ ಹೊಡೆದ ಕಾರು ಪರಾರಿಯಾಗಿದೆ. ಬೈಕಿನಲ್ಲಿದ್ದವರಿಗೆ ತೀವ್ರ ಗಾಯವಾಗಿತ್ತು. ಕೂಡಲೆ ಸ್ಥಳೀಯರು ನೆರವಿಗೆ ಧಾವಿಸಿದ್ದರು. ಅದೇ ಮಾರ್ಗದಲ್ಲಿ ಹೊಸನಗರಕ್ಕೆ ತೆರಳುತ್ತಿದ್ದ ಸಚಿವ ಮಧು ಬಂಗಾರಪ್ಪ ಕೂಡಲೆ ನೆರವಾದರು. ಗಾಯಾಳುಗಳನ್ನು (Injured) ತಮ್ಮದೆ ಕಾರಿನಲ್ಲಿ ಆಸ್ಪತ್ರೆಗೆ ಕಳುಹಿಸಿದರು.
ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡುವಂತೆ ವೈದ್ಯರಿಗೆ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಇನ್ನು, ಡಿಕ್ಕಿ ಹೊಡೆಸಿ ಸ್ಥಳದಿಂದ ಪರಾರಿಯಾದ ಕಾರನ್ನು ಪತ್ತೆ ಹೆಚ್ಚುವಂತೆ ಪೊಲೀಸರಿಗೆ ಸೂಚನೆ ನೀಡಿದರು.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200