ಸೊರಬ : ಉದ್ಯೋಗ ಖಾತ್ರಿ ಯೋಜನೆ ಅಡಿ ಶಾಲೆಯ ಕಾಂಪೌಂಡ್ ಮತ್ತು ಅಡುಗೆ ಮನೆ ನಿರ್ಮಾಣ ಕಾಮಗಾರಿ ನಡೆಸಲಾಗುತ್ತಿದೆ. ಏ.7ರಂದು ಬೆಳಗ್ಗೆ 8ಕ್ಕೆ ಸೊರಬ ತಾಲೂಕು ಹುರಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (School) ಕಾರ್ಯಕ್ರಮ ನಡೆಯಲಿದೆ. ಅಂದು ಇಬ್ಬರು ಸಚಿವರು ಶ್ರಮದಾನ ಮಾಡಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಶಾಲೆಯ ಕಾಂಪೌಂಡ್ ನಿರ್ಮಾಣ ಮತ್ತು ಅಡುಗೆ ಮನೆ ನಿರ್ಮಾಣ ಕಾಮಗಾರಿಗೆ ಶ್ರಮದಾನ ಮಾಡಲಿದ್ದಾರೆ. ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಕೂಡ ಶ್ರಮದಾನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
![]() |
ಈ ಹಿಂದೆ ಶಾಸಕರಾಗಿದ್ದಾಗ ಮಧು ಬಂಗಾರಪ್ಪ ಶ್ರಮದಾನ ಮಾಡಿದ್ದರು. ಈಗ ಪುನಃ ಕ್ಷೇತ್ರ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿ ಶ್ರಮದಾನಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ » ನೆಹರು ಸ್ಟೇಡಿಯಂನಲ್ಲಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ, ಪ್ರತಿಜ್ಞೆ ಸ್ವೀಕಾರ, ಯಾರೆಲ್ಲ ಏನೆಲ್ಲ ಮಾತಾಡಿದರು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200